ಜೈನಮುನಿ ಹತ್ಯೆ ಖಂಡಿಸಿ ಇಂದು ವಿಧಾನಸಭೆಯಲ್ಲಿ BJP ಹೋರಾಟ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡಿಸಿ ಸೋಮವಾರದ ಇಂದು ವಿಧಾನಸಭೆಯ ಒಳಗೆ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸ್ವಾಮೀಜಿಯ ಅಮಾನವೀಯ ಕೊಲೆ ಖಂಡಿಸಿ ಅನ್ನ ನೀರು ಬಿಟ್ಟು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹುಬ್ಬಳ್ಳಿಯ ವರೂರು ಶ್ರೀಕ್ಷೇತ್ರದ ಶ್ರೀ ಗುಣಧರ ನಂದಿ ಮಹಾರಾಜರಿಗೆ ದೂರವಾಣಿ ಮೂಲಕ ಮಾತನಾಡಿ ಈ ಘಟನೆಯನ್ನು ಉಗ್ರವಾಗಿ ಖಂಡಿಸಿರುವುದಾಗಿ ತಿಳಿಸಿದ್ದಾರೆ.

 

ಅಲ್ಲದೇ ಈ ಬಗ್ಗೆ ಉನ್ನತ ಮಟ್ಟಡ ತನಿಖೆ ನಡೆಸುವಂತೆ ಸರ್ಕಾರಕ್ಕೆ ಆಗ್ರಹಿಸಿರುವುದಾಗಿ ತಿಳಿಸಿದ ಬೊಮ್ಮಾಯಿಯವರು, ಹತ್ಯೆಯನ್ನು ಖಂಡಿಸಿ, ಉನ್ನತ ಮಟ್ಟದ ತನಿಖೆ ನಡೆಸುವಂತೆ ಸೋಮವಾರ ವಿಧಾನಸಭೆಯಲ್ಲಿ ಹೋರಾಟ ಮಾಡುವುದಾಗಿ ಬಸವರಾಜ ಬೊಮ್ಮಾಯಿ ಸ್ವಾಮೀಜಿಗೆ ತಿಳಿಸಿದ್ದಾರೆ.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.