ಉಡುಪಿ: ಸಂತೆಕಟ್ಟೆ ಓವರ್ ಪಾಸ್ ಕಾಮಗಾರಿ ಒಂದು ಭಾಗ ಕುಸಿತ, ಆತಂಕದಲ್ಲಿ ಸ್ಥಳೀಯರು

ಉಡುಪಿ: ಉಡುಪಿಯ ಸಂತೆಕಟ್ಟೆ ಬಳಿ ಕಾಮಗಾರಿ ಹಂತದಲ್ಲಿರುವ ಓವರ್ ಪಾಸ್ ಕಾಮಗಾರಿಯ ಬೃಹತ್ ಹೊಂಡದ ಒಂದು ಭಾಗ ಕುಸಿದಿದ್ದು, ಸ್ಥಳೀಯರಲ್ಲಿ ಆತಂಕ‌ ಸೃಷ್ಟಿಯಾಗಿದೆ. ಮಳೆಗಾಲಕ್ಕೂ ಮುನ್ನ ಓವರ್ ಪಾಸ್ ಕಾಮಗಾರಿ ಪ್ರಾರಂಭಿಸಲಾಗಿತ್ತು. ಅದಕ್ಕಾಗಿ ಬೃಹತ್ ಹೊಂಡ ತೋಡಲಾಗಿತ್ತು. ಹೊಂಡದಲ್ಲಿ ಭಾರೀ ಪ್ರಮಾಣದ ಬಂಡೆ ಕಲ್ಲು ಕಂಡುಬಂದ ಕಾರಣ ಕಾಮಗಾರಿ ಬಹುತೇಕ ನಿಧಾನಗೊಂಡಿತ್ತು. ಬಳಿಕ ಭಾರೀ ಮಳೆಗೆ ಟಾರ್ಪಲ್ ಅಳವಡಿಕೆ ಮಾಡಲಾಗಿತ್ತು. ಆದರೆ ಇಂದು ಕಾಮಗಾರಿ ಸ್ಥಳದಲ್ಲಿ ಮಣ್ಣು ಕುಸಿಯುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ.

Check Also

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.