ಕಾಪು : ಹೆಚ್ಚುತ್ತಿರುವ ಅಪಘಾತ, ಪೊಲೀಸರಿಂದ ಸೂಚನಾ ಫಲಕ ಅಳವಡಿಕೆ

ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಜಂಕ್ಷನ್ ನಲ್ಲಿ ಪ್ರತಿದಿನ ಅಪಘಾತ ಸಂಭವಿಸುತ್ತಿದೆ. ಕಳೆದ ಒಂದು ತಿಂಗಳಲ್ಲಿ ಇಲ್ಲಿ ಹಲವು ಜೀವಗಳು ಅಪಘಾತಕ್ಕೆ ಬಲಿಯಾಗಿವೆ. ಅವೈಜ್ಞಾನಿಕ ರಸ್ತೆ ನಿರ್ಮಾಣ ಒಂದೆಡೆಯಾದರೆ, ವಾಹನ ಸವಾರರು ಸಂಚಾರಿ ನಿಯಮಗಳನ್ನು ಪಾಲಿಸದೇ ಇರುವುದೂ ಅಪಘಾತಗಳಿಗೆ ಕಾರಣವಾಗುತ್ತಿವೆ. ಇವತ್ತು ಪೊಲೀಸ್ ಇಲಾಖೆಯಿಂದ ಮುಂಜಾಗ್ರತಾ ಕ್ರಮವಾಗಿ ವಾಹನ ಸವಾರರಿಗೆ ಜಾಗೃತಿ ಮೂಡಿಸುವ ಸೂಚನಾ ಫಲಕವನ್ನು ಕಟಪಾಡಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಅಳವಡಿಸಲಾಯಿತು. ಕಾಪು ವೃತ್ತ ನಿರೀಕ್ಷಕರಾದ ಪೂವಯ್ಯ, ಕಾಪು ಠಾಣಾಧಿಕಾರಿ ಶ್ರೀಶೈಲ ಮುರಗೋಡ ಮತ್ತು ಕಟಪಾಡಿ ಉಪ ಠಾಣಾ ಸಿಬ್ಬಂದಿ ರುಕ್ಮಯ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Check Also

BIG NEWS: ವಿಧಾನಸಭೆಯಲ್ಲಿ ಶಾಸಕಿ ನಯನಾ ಮೋಟಮ್ಮ ‘ಸಿಎಂ ಆಸನ’ದ ಮೇಲೆ ಕುಳಿತು ಮಹಾ ಯಡವಟ್ಟು

ಬೆಳಗಾವಿ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡೋದಕ್ಕೆ ವಿಧಾನಸಭೆಯ ಸದನಕ್ಕೆ ತೆರಳಿದ್ದಂತ ಮೂಡುಗೆರೆ ಶಾಸಕಿ ನಯನಾ ಮೋಟಮ್ಮ …

Leave a Reply

Your email address will not be published. Required fields are marked *

You cannot copy content of this page.