ಮಂಗಳೂರು: ಗೋ ಮಾಂಸ ಸಾಗಾಟ – ಮೂವರು ಪೊಲೀಸರ ವಶಕ್ಕೆ

ಮಂಗಳೂರು: ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಬಜರಂಗದಳದ ಕಾರ್ಯಕರ್ತರು ಭಾನುವಾರ ಮುಂಜಾನೆ ತಡೆದು ನಿಲ್ಲಿಸಿ, ವಾಹನದಲ್ಲಿದ್ದವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿಗಳನ್ನು ಕಳವಾರು ಗ್ರಾಮದ ದಾವೂದ್‌, ಜೋಕಟ್ಟೆಯ ಬದ್ರುದ್ದೀನ್‌ ಮತ್ತು ಯಾಸೀನ್‌ ಎಂದು ಗುರುತಿಸಲಾಗಿದೆ.

ವಾಹನದಲ್ಲಿ 2.5 ಕ್ವಿಂಟಾಲ್‌ಗಿಂತಲೂ ಹೆಚ್ಚಿನ ಪ್ರಮಾಣದ ದನದ ಮಾಂಸವನ್ನು ಜೋಕಟ್ಟೆಯಿಂದ ನಗರದ ಬೀಫ್‌ ಸ್ಟಾಲ್‌ಗ‌ಳಿಗೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು.

ಗೋ ಹತ್ಯಾ ನಿಷೇಧ ಕಾಯ್ದೆಯಡಿ ಉರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಮಣಿಪಾಲ: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ..! ಸ್ಥಳೀಯರಲ್ಲಿ ಆತಂಕ

ಮಣಿಪಾಲ: ಉಡುಪಿ ನಗರದ ಮಣಿಪಾಲದ ಬಳಿಯ ಪೆರಂಪಳ್ಳಿಯ ಮನೆಯೊಂದರ ಅಂಗಳದಲ್ಲಿ ಶುಕ್ರವಾರ ರಾತ್ರಿ ಚಿರತೆ ಸಂಚಾರ ಕಂಡು ಬಂದಿದ್ದು, ಘಟನೆ …

Leave a Reply

Your email address will not be published. Required fields are marked *

You cannot copy content of this page.