ಛೇ..! ಇದೆಂತಾ ದುರ್ದೈವ – ಒಂದೇ ಮನೆಯಲ್ಲಿ ಮಗ, ತಾಯಿ ಇಬ್ಬರಿಗೂ ಹೃದಯಾಘಾತ

ಬೆಂಗಳೂರು: ಮಗನಿಗೆ ಹೃದಯಾಘಾತವಾದ ವಿಚಾರ ತಿಳಿದು ತಾಯಿಗೂ ಹೃದಯಾಘಾತವಾಗಿರುವ ಮನ ಮಿಡಿಯುವ ಘಟನೆ ಬೆಂಗಳೂರಿನ ಕೆಂಗೇರಿ ಉಪ ನಗರದ ವರಗೇರನಹಳ್ಳಿಯಲ್ಲಿ ನಡೆದಿದೆ.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ನವೀನ್ (28) ಖಾಸಗಿ ಆಸ್ಪತ್ರೆಯೊಂದರಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ರಾತ್ರಿ ಆಸ್ಪತ್ರೆಯಲ್ಲಿಯೇ ಹೃದಯಾಘಾತದಿಂದ ನವೀನ್ ಕೊನೆಯುಸಿರೆಳೆದಿದ್ದಾರೆ. ಮಗನ ಸಾವಿನ ಸುದ್ದಿಯನ್ನು ಅರಗಿಸಿಕೊಳ್ಳಲಾಗದೇ ತಾಯಿಗೂ ಬೆಳಗಿನ ಜಾವ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.

ತಾಯಿ, ಮಗ ಇಬ್ಬರೂ ಒಂದು ದಿನ ಮೃತಪಟ್ಟಿದ್ದು, ನಿಜಕ್ಕೂ ಇದೊಂದು ವಿಪರ್ಯಾಸವೆಂದೇ ಹೇಳಬಹುದು. ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ವರಗೇರನಹಳ್ಳಿ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ

Check Also

ಮಂಗಳೂರು : ತುಳುನಾಡ್ ಟ್ರಸ್ಟ್ (ರಿ) ಇದರ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಆಚರಣೆ

ಮಂಗಳೂರು : ಇಂದು ನಗರದ ಕೆಪಿಟಿಯ ಕದ್ರಿ ಬಳಿ ಇರುವ ವೀರ ಯೋಧರ ಸ್ಮಾರಕ ಭವನದಲ್ಲಿ ನಮ್ಮ ತುಳುನಾಡ್ ಟ್ರಸ್ಟ್ …

Leave a Reply

Your email address will not be published. Required fields are marked *

You cannot copy content of this page.