April 16, 2025
WhatsApp Image 2025-03-21 at 3.06.29 PM

ಬೆಳ್ತಂಗಡಿ: ಭೀಕರ ಬೈಕ್‍ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಾರಾವಿ ಕುತ್ಲೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಬೈಕ್ ಸವಾರರಾದ ಪ್ರಶಾಂತ್ ಹಾಗೂ ದಿನೇಶ್ ಎಂಬವರೇ ಮೃತಪಟ್ಟವರು.

ಕುತ್ಲೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ರಾತ್ರಿಯ ವೇಳೆ ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ ಹನ್ನೆರಡು ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ. ವೇಣೂರು ಪೋಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>