ಕುಂಬಳೆ: ಬಿಜೆಪಿ ಯುವಮೋರ್ಚಾದ ಕಾರ್ಯದರ್ಶಿಯ ಮೃತದೇಹ ಉಳ್ಳಾಲದ ನದಿ ತೀರದಲ್ಲಿ ಪತ್ತೆ..!

ಉಳ್ಳಾಲ: ಸಂಜೆ ದಿಢೀರ್ ನಾಪತ್ತೆಯಾಗಿದ್ದ ಬಿಜೆಪಿ ಯುವಮೋರ್ಚಾ ಕುಂಬಳೆ ಮಂಡಲ ಕಾರ್ಯದರ್ಶಿಯ ಮೃತದೇಹ ತೊಕ್ಕೊಟ್ಟು ಬಳಿಯ ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ. ಜು. ೧೦ರ ಸೋಮವಾರ ಸಂಜೆ ವೇಳೆ ಕುಂಬಳೆ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿರುವ ರಾಜೇಶ್ (26) ನಾಪತ್ತೆಯಾಗಿದ್ದರು. ಇಂದು ಬೆಳಗ್ಗೆ ಯುವಕನ ಮೃತದೇಹ ತೊಕ್ಕೊಟ್ಟು ಬಳಿಯ ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದೆ. ಮೃತ ರಾಜೇಶ್ ಸಾರಣೆ ಕೆಲಸ ಮಾಡುತ್ತಿದ್ದು, ಊರಿನ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ದುಡಿಯುತ್ತಿದ್ದರು. ಸಾಮಾಜಿಕ ಕಾರ್ಯಗಳಲ್ಲಿ ತನ್ನನು ತಾನು ತೊಡಗಿಸಿಕೊಂಡಿದ್ದರು. ಯುವಶಕ್ತಿ ಸೇವಾ ಪಥದ ಮೂಲಕ ನೊಂದ ಹೃದಯಗಳಿಗೆ ನೆರವನ್ನು ನೀಡುವಲ್ಲಿ ಸಹಕಾರಿಯಾಗಿದ್ದರು. ಬಂಬ್ರಾಣ ಸ್ವಾಗತ್ ಫ್ರೆಂಡ್ಸ್ ನ ಮಾಜಿ ಕಾರ್ಯದರ್ಶಿಯಾಗಿದ್ದರು. ಅಲ್ಲದೆ ಬಿಜೆಪಿ ಯುವಮೋರ್ಚಾ ಕುಂಬಳೆ ಮಂಡಲ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ನದಿ ತೀರದಲ್ಲಿ ಮೃತದೇಹ ಪತ್ತೆಯಾಗಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೊನ್ನೆ ಸೋಮವಾರ ಸಂಜೆ 5.45 ಕೆ ಮನೆಯಿಂದ ಬೈಕಿನಲ್ಲಿ ತೆರಳಿದವರು ಮರಳಿ ಮನೆಗೆ ಬಾರದನ್ನು ಕಂಡು ಮನೆಯವರು ಹಾಗೂ ಗೆಳೆಯರು ಮೊಬೈಲ್ ಗೆ ಸಂಪರ್ಕಿಸಿದಾಗ ಸ್ವಿಚ್ ಆಫ್ ಆಗಿತ್ತು. ಕೂಡಲೇ ಮನೆಯವರು ಕುಂಬಳೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿದರು. ಇಂದು ಬೆಳಗ್ಗೆ 6 ಗಂಟೆ ವೇಳೆ ತೊಕ್ಕೊಟ್ಟು ನೇತ್ರಾವತಿ ನದಿ ತೀರವಾದ ಬೆಂಗರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಪಾಂಡೇಶ್ವರ ಪೊಲೀಸರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದರು. ಮೃತದೇಹದ ಪ್ಯಾಂಟ್ ಕಿಸೆಯಲ್ಲಿ ಲಭಿಸಿದ ಮೊಬೈಲ್ ಫೋನ್ ನ ಸಿಮ್ ನ್ನು ಬೇರೊಂದು ಮೊಬೈಲ್ ಗೆ ಇಟ್ಟಾಗ ರಾಜೇಶ್ ರ ಸಂಬಂಧಿಕರು ಕಾಲ್ ಕರೆ ಮಾಡಿದ್ದರು. ಕೂಡಲೇ ಪೊಲೀಸರು ಸಂಬಂಧಿಕರಿಗೆ ವಿಷಯವನ್ನು ತಿಳಿಸಿದ್ದು ಮನೆ ಮಂದಿ ಆಸ್ಪತ್ರೆಗೆ ತೆರಳಿ, ಮೃತದೇಹದ ಗುರುತು ಪತ್ತೆ ಹಚ್ಚಿದರು.

Check Also

ಹತ್ರಸ್ ಸತ್ಸಂಗ ಕಾಲ್ತುಳಿತ ದುರಂತ: ಮೃತದೇಹಗಳನ್ನು ಕಂಡು ಪೊಲೀಸ್ ಪೇದೆಗೆ ಹೃದಯಾಘಾತ

ದೆಹಲಿ : ಉತ್ತರ ಪ್ರದೇಶದ ಹತ್ರಾಸ್ ಸತ್ಸಂಗದ ವೇಳೆ ನೂಕುನುಗ್ಗಲು ಉಂಟಾಗಿ ಸ್ಥಳದಲ್ಲಿ ಬಿದ್ದಿದ್ದ 100ಕ್ಕೂ ಹೆಚ್ಚು ಮೃತ ದೇಹಗಳನ್ನು …

Leave a Reply

Your email address will not be published. Required fields are marked *

You cannot copy content of this page.