May 22, 2025 12:51:19 AM
WhatsApp Image 2024-03-13 at 2.40.13 PM

ಚಾಲಕನ ನಿಯಂಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾದ ಘಟನೆ ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿಘಾಟ್‌ನಲ್ಲಿ ನಡೆದಿದೆ.

ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಸನಿಹದ ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಗ್ಯಾಸ್ ಸೋರಿಕೆಯಾಗುತ್ತಿದೆ. ಮುನ್ನಚ್ಚರಿಕಾ ಕ್ರಮವಾಗಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಪೊಲೀಸರು ಕಳುಹಿಸುತ್ತಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಪೊಲೀಸರು ತಲುಪಿದೆ.

ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು ಸಕಲೇಶಪುರದಿಂದ ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು ಸೂಚನೆ ನೀಡಲಾಗಿದೆ. ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಬಿಸ್ಲೆ ಹಾಗೂ ಚಾರ್ಮಾಡಿ ಮಾರ್ಗವಾಗಿ ತೆರಳಲು ಸೂಚನೆ ನೀಡಲಾಗಿದೆ. ಪಲ್ಟಿಯಾದ ಗ್ಯಾಸ್ ಟ್ಯಾಂಕರ್‌ನಿಂದ ಭಾರಿ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗಿದೆ. ಹೀಗಾಗಿ ಗ್ಯಾಸ್ ಟ್ಯಾಂಕರ್ ತೆರವು ಕಾರ್ಯಾಚರಣೆ ಮುಗಿಯುವವರೆಗೂ ಎಲ್ಲಾ ವಾಹನಗಳ ಸಂಚಾರ ಬಂದ್ ಆಗಲಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>