ಬೆಳ್ತಂಗಡಿ : ಅಕ್ರಮ ಜಾನುವಾರು ಸಾಗಾಟ- 8 ಜಾನುವಾರು ರಕ್ಷಣೆ, 4 ಆರೋಪಿಗಳ ಬಂಧನ

ಬೆಳ್ತಂಗಡಿ : ಅಕ್ರಮವಾಗಿ ಮೂರು ವಾಹನಗಳಲ್ಲಿ ಹಿಂಸ್ಮಾಕ ರೀತಿಯಲ್ಲಿ ಏಂಟು ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಭೇಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೂರು ಪಿಕಪ್  ಸಹಿತ 8 ಜಾನುವಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಈ  ಸಂಬಂಧ ನಾಲ್ವರನ್ನು  ಬಂಧಿಸಿದ್ದಾರೆ.

ಚೆನ್ನಕೇಶವ (33 ವ)ಮರವಳಲು ಕಸಬಾ ಹೋಬಳಿ, ಅರಕಲಗೂಡು ಹಾಸನದ ಅರಕಲಗೂಡಿನ ಮರವಳಲು ಕಸಬಾ ಹೋಬಳಿಯ ಚೆನ್ನ ಕೇಶವ, ಬೆಳ್ತಂಗಡಿ  ನಾವೂರು ಒಳಗದ್ಡೆಯ ಪುಷ್ಪರಾಜ್ , ಮೋರ್ತಾಜೆ ಮನೆಯ ಪ್ರಮೋದ್ ಸಾಲ್ಯಾನ್,  ಹೊಳೆ ನರಸೀಪುರ ಹಳೇಕೋಟೆ ಹೋಬಳಿ ಸಂದೀಪ್ ಹಿರೇಬೆಳಗುಳಿ ಬಂಧಿತ ಆರೋಪಿಗಳಾಗಿದ್ದಾರೆ.

ಧಮ೯ಸ್ಥಳ ಠಾಣೆಯ ಎಸ್.ಐ ಅನಿಲಕುಮಾರ್‌ ತಂಡದವರು ಬುಧವಾರ  ಖಚಿತ ಮಾಹಿತಿಯಂತೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ಸಿಬ್ಬಂದಿರವರುಗಳೊಂದಿಗೆ ವಾಹನ ತಪಾಸಣೆ ಮಾಡುತ್ತಿದ್ದ ಸಮಯ ರಾತ್ರಿ 8.45 ಗಂಟೆಗೆ ಉಜಿರೆ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಮೂರು ಪಿಕಪ್ ವಾಹನಗಳಾದ ಕೆಎ-21ಬಿ-7389 ಕೆಎ-70-0312 ಮತ್ತು ಕೆಎ670209 ನೇ ನೋಂದಣಿ ಸಂಖ್ಯೆಯ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಅಕ್ರಮವಾಗಿ ಜಾನುವಾರು ಸಾಗಾಟದ ಪ್ರಕರಣ ಬೆಳಕಿಗೆ ಬಂದಿತ್ತು.

ವಾಹನದಲ್ಲಿ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿತ್ತು.

ವಾಹನದಲ್ಲಿದ್ದ ಚೆನ್ನಕೇಶವ ಎಂಬಾತನನ್ನು ಪೊಲೀಸರು ವಿಚಾರಿಸಿದಾಗ ಮಾರಾಟ ಮಾಡುವ ಉದ್ದೇಶದಿಂದ ವಾಹನದಲ್ಲಿ ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ವಾಹನ ಸಹಿತ ಜಾನುವಾರುಗಳನ್ನು ಸ್ವಾಧೀನಪಡಿಸಿಕೊಂಡ ಪೊಲೀಸರು ನಾಲ್ವರು ಆಪಾದಿತರುಗಳನ್ನು ತಮ್ಮವಶಕ್ಕೆ ಪಡೆದುಕೊಂಡಿದ್ದಾರೆ.

ಸ್ವಾಧೀನಪಡಿಸಿಕೊಂಡ ಜಾನುವಾರುಗಳ ಅಂದಾಜು ಮೌಲ್ಯ ರೂ. 65 ಸಾವಿರ ಹಾಗೂ ವಾಹನದ ಅಂದಾಜು ಮೌಲ್ಯ ರೂ.7 ಲಕ್ಷ ಒಟ್ಟು ಸ್ವಾಧೀನ ಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ ರೂ 7.65 ಲಕ್ಷ ಎಂದು ಅಂದಾಜಿಸಲಾಗಿದೆ.

ಧರ್ಮಸ್ಥಳ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.