ಬೈಕ್‌ ಮತ್ತು ಬಸ್‌ ನಡುವೆ ಅಪಘಾತ ಸವಾರ ಮೃತ್ಯು-ಪಡುಬಿದ್ರಿ

ಪಡುಬಿದ್ರಿ: ಬೈಕ್‌ ಮತ್ತು ಬಸ್‌ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ‌ ವಾಹನ ಸವಾರ ಸಾವನ್ನಪ್ಪಿರುವ ಘಟನೆ ನಂದಿಕೂರು ಮುದರಂಗಡಿ ಜಂಕ್ಷನ್ ನಲ್ಲಿ ಇಂದು ಮುಂಜಾನೆ ನಡೆದಿದೆ.

ಕಾರ್ಕಳ ಅಜೆಕಾರು ನಿವಾಸಿ ಅಶ್ವಿತ್ ಶೆಟ್ಟಿ(24) ಮೃತ ಯುವಕ.ಅಶ್ವಿತ್ ಶೆಟ್ಟಿ ಅವರು ಯೂಟ್ಯೂಬ್ ವ್ಲಾಗರ್ ಹಾಗೂ ಅಜೆಕಾರಿನ ಟೆಂಪೋ ಚಾಲಕ ಮಾಲಕರೂ ಆಗಿದ್ದರು ಎನ್ನಲಾಗಿದೆ.

ಇನ್ನು ಹವ್ಯಾಸಿ ಬೈಕ್ ಸವಾರರಾಗಿದ್ದ ಅಶ್ವಿತ್ ಅವರು ತಿಂಗಳ ಹಿಂದಷ್ಟೇ ಬೈಕಲ್ಲಿಯೇ ಜಮ್ಮು ಕಾಶ್ಮೀರದ ಲಡಾಖ್ ಗೂ ಹೋಗಿ ಬಂದಿದ್ದರು. ಇಂದು ಅಜೆಕಾರಿನಿಂದ ಬೈಕ್ ಸರ್ವೀಸ್ ಗೆ ಹೋಗುತ್ತಿದ್ದರು ಎನ್ನಲಾಗಿದೆ.

ಅವಿವಾಹಿತರಾಗಿದ್ದ ಮೃತ ಅಶ್ವಿತ್ ತನ್ನ ತಾಯಿ, ಅಣ್ಣ ಹಾಗೂ ಅಕ್ಕನನ್ನು ಅಗಲಿದ್ದಾರೆ.

Check Also

ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ- ನೆಲ್ಯಾಡಿ ಬಳಿ ಅಪಹರಣಕಾರರ ಬಂಧನ

ಹಾಸನ: ಹಾಸನದ ಬಿಟ್ಟಗೌಡನಹಳ್ಳಿ ಬಳಿ ನಡೆದಿದ್ದ ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಅಪಹರಣಕಾರರನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡದ …

Leave a Reply

Your email address will not be published. Required fields are marked *

You cannot copy content of this page.