ಮಲ್ಪೆ: ಗಣೇಶ ವಿಸರ್ಜನೆ ವೇಳೆ ಬೆಂಕಿ ಉಗುಳುತ್ತಿದ್ದ ವ್ಯಕ್ತಿ ತೀವ್ರ ಅಸ್ವಸ್ಥಗೊಂಡು ಸಾವು

ಮಲ್ಪೆ: ಗಣೇಶ ವಿಸರ್ಜನೆ ಸಂದರ್ಭ ಬಾಯಿಗೆ ಸೀಮೆ ಎಣ್ಣೆ ಹಾಕಿಕೊಂಡು ಬೆಂಕಿ ಉಗುಳುವ ವೇಳೆ ವ್ಯಕ್ತಿಯೊಬ್ಬರು ತೀವ್ರ ಅಸ್ವಸ್ಥಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ಸಂಭವಿಸಿದೆ. ಮಲ್ಪೆಯ ಸತೀಶ್‌ (39) ಮೃತ ವ್ಯಕ್ತಿ.ಅವರು ಮಲ್ಪೆ ಬೀಚ್‌ನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಬಾಯಿಗೆ ಸೀಮೆ ಎಣ್ಣೆ ಹಾಕಿಕೊಂಡು ಬೆಂಕಿಯೊಂದಿಗೆ ಹೊರಕ್ಕೆ ಉಗುಳುತ್ತಿದ್ದರು. ಈ ಸಮಯದಲ್ಲಿ ಆಕಸ್ಮಿಕವಾಗಿ ಸೀಮೆ ಎಣ್ಣೆ ಅವರ ಹೊಟ್ಟೆಯೊಳಗೆ ಹೋಗಿದೆ ಎನ್ನಲಾಗಿದೆ. ತೀವ್ರ ಅಸ್ವಸ್ಥಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಅವರು ಚಿಕಿತ್ಸೆ ಫ‌ಲಿಸದೆ ಮೃತಪಟ್ಟರು.ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು

ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತಿ ಭಂಗ …

Leave a Reply

Your email address will not be published. Required fields are marked *

You cannot copy content of this page.