ಉಡುಪಿ ಶ್ರೀಕೃಷ್ಣ ಮಠದ ಬಳಿ ಬಾವಿಗೆ ಬಿದ್ದ ಪ್ರವಾಸಕ್ಕೆಂದು ಬಂದಿದ್ದ ಯುವಕ..!

ಡುಪಿ: ಪ್ರವಾಸಕ್ಕೆಂದು ಬಂದಿದ್ದ ಯುವಕ ಆಯತಪ್ಪಿ ಬಾವಿಗೆ ಬಿದ್ದ ಘಟನೆ ಉಡುಪಿ ಶ್ರೀಕೃಷ್ಣ ಮಠದ ಬಳಿ ನಡೆದಿದೆ.

ಬಾಗಲಕೋಟೆ ಮೂಲದ ಸಂತೋಷ್ ಎಂಬಾತ ಪ್ರವಾಕ್ಕೆಂದು ಉಡುಪಿಗೆ ಬಂದಿದ್ದಾನೆ. ಈ ವೇಳೆ ಶ್ರೀಕೃಷ್ಣ ಮಠದ ಬಳಿ ಸುತ್ತಾಡುತ್ತಾ ಬಾವಿಯ ಕಟ್ಟೆಯ ಮೇಲೆ ಕುಳಿತಿದ್ದ.

ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿದ ಸಂತೋಷ್ ಬಾವಿಯೊಳಗೆ ಬಿದ್ದಿದ್ದಾನೆ.

ಸ್ಥಳೀಯರು ಬಾವಿಯೊಳಗೆ ಹಗ್ಗ ಬಿಟ್ಟು ಪ್ರವಾಸಿಗನನ್ನು ಮೇಲಕೆತ್ತಿದ್ದಾರೆ. ಬಾವಿಯಲ್ಲಿ ನೀರು ಕಡಿಮೆ ಇದ್ದುದರಿಂದ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಪ್ರವಾಸಿಗ ಸುರಕ್ಷಿತವಾಗಿದ್ದಾನೆ ಎಂದು ತಿಳಿದುಬಂದಿದೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.