ಹಾವೇರಿ ಕ್ಷೇತ್ರಕ್ಕೆ ಬಸವರಾಜ್ ಬೊಮ್ಮಾಯಿ ಹೆಸರು ಘೋಷಣೆ-ಈಶ್ವರಪ್ಪ ಆಕ್ರೋಶ; ಶಿವಮೊಗ್ಗದಿಂದ ಬಂಡಾಯ?

ಶಿವಮೊಗ್ಗ: ಬಿಜೆಪಿ ಎರಡನೇ ಪಟ್ಟಿ ಪ್ರಕಟವಾಗುತ್ತಿದ್ದಂತೆ ಹಾವೇರಿ ಕ್ಷೇತ್ರಕ್ಕೆ ಬಸವರಾಜ್ ಬೊಮ್ಮಾಯಿ ಅವರ ಹೆಸರು ಘೋಷಣೆಯಾದುದನ್ನು ಕಂಡು ಮಾಜಿ ಸಿಎಂ ಕೆ.ಎಸ್. ಈಶ್ವರಪ್ಪ ಅವರು ಭಾರೀ ಆಕ್ರೋಶ ಹೊರ ಹಾಕಿ ಬೆಂಬಲಿಗರ ಸಭೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ”ಯಡಿಯೂರಪ್ಪ ಅವರು ನನಗೆ ಮೋಸ ಮಾಡಿದ್ದಾರೆ. ಕಾಂತೇಶ್ ಗೆ ಟಿಕೆಟ್ ನೀಡುವ ಭರವಸೆ ನೀಡಿದ್ದರು. ಮಾರ್ಚ್ 15 ರಂದು ಸಂಜೆ ಶಿವಮೊಗ್ಗದಲ್ಲಿ ಬೆಂಬಲಿಗರ ಸಭೆ ನಡೆಸುತ್ತೇನೆ. ಆ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

ನಾನು 40 ವರ್ಷ ಪಕ್ಷಕ್ಕೆ ನಿಷ್ಠನಾಗಿದ್ದೇನೆ. ಅದನ್ನು ಗುರುತಿಸಿ ನನ್ನ ಮಗನಿಗೆ ಟಿಕೆಟ್ ಕೊಡಬಹುದಿತ್ತು. ಸದಾನಂದ ಗೌಡ, ಸಿ.ಟಿ.ರವಿ, ಪ್ರತಾಪ್ ಸಿಂಹ ಅವರಿಗೆ ಅನ್ಯಾಯವಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ಟಿಕೆಟ್ ಪ್ರಕಟವಾಗುತ್ತಿದ್ದಂತೆ ಹಾವೇರಿ ಟಿಕೆಟ್ ಗಾಗಿ ತೀವ್ರ ಪ್ರಯತ್ನ ನಡೆಸಿದ್ದ ಕೆ.ಈ.ಕಾಂತೇಶ್ ಇತರ ಬೆಂಬಲಿಗರೊಂದಿಗೆ ಈಶ್ವರಪ್ಪ ಅವರು ಕಾರಿನಲ್ಲಿ ಹೊರಟರು. ಫೋನ್ ಕರೆಯೊಂದು ಬರುತ್ತಿದ್ದಂತೆ ತುರ್ತಾಗಿ ಈಶ್ವರಪ್ಪ ಮತ್ತು ಕಾಂತೇಶ್ ಅವರು ತೆರಳಿದರು. ಅವರ ಮುಖದಲ್ಲಿ ತೀವ್ರ ಬೇಸರ, ಆಕ್ರೋಶ ಮನೆ ಮಾಡಿತ್ತು.

Check Also

ಮಣಿಪಾಲ: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ..! ಸ್ಥಳೀಯರಲ್ಲಿ ಆತಂಕ

ಮಣಿಪಾಲ: ಉಡುಪಿ ನಗರದ ಮಣಿಪಾಲದ ಬಳಿಯ ಪೆರಂಪಳ್ಳಿಯ ಮನೆಯೊಂದರ ಅಂಗಳದಲ್ಲಿ ಶುಕ್ರವಾರ ರಾತ್ರಿ ಚಿರತೆ ಸಂಚಾರ ಕಂಡು ಬಂದಿದ್ದು, ಘಟನೆ …

Leave a Reply

Your email address will not be published. Required fields are marked *

You cannot copy content of this page.