ಉಡುಪಿ: ಸಚಿವೆ ನಿರ್ಮಲ ಸೀತಾರಾಮನ್ ರವರನ್ನು ಭೇಟಿ ಮಾಡಿದ ಮೀನುಗಾರರ ನಿಯೋಗ – ನೇಕಾರರ ನಿಯೋಗ, ವಿವಿಧ ಬೇಡಿಕೆಗಳ ಬಗ್ಗೆ ಮನವಿ

ಉಡುಪಿ ಜಿಲ್ಲೆಗೆ ಆಗಮಿಸಿದ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ರವರನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಮೀನುಗಾರರ ನಿಯೋಗ ಹಾಗೂ ನೇಕಾರರ ನಿಯೋಗ ಸಚಿವರನ್ನು ಭೇಟಿ ಮಾಡಿ ಮೀನುಗಾರಿಕೆ ಹಾಗೂ ನೇಕಾರರ ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಿ ಸಹಕಾರ ಕೋರಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ ಕೂರ್ಮಾ ರಾವ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪ್ರಸನ್ನ, ಮೀನುಗಾರ ಮುಖಂಡರಾದ ಶ್ರೀ ದಯಾನಂದ ಸುವರ್ಣ, ಶ್ರೀ ಜಯ ಸಿ. ಕೋಟ್ಯಾನ್, ಶ್ರೀ ರಾಮಚಂದ್ರ ಕುಂದರ್, ಶ್ರೀ ಕಿಶೋರ್ ಡಿ. ಸುವರ್ಣ, ನೇಕಾರರ ನಿಯೋಗದ ಮುಖಂಡರಾದ ಶ್ರೀ ರತ್ನಾಕರ ಇಂದ್ರಾಳಿ, ಶ್ರೀ ಜಗದೀಶ್ ಶೆಟ್ಟಿಗಾರ್, ಶ್ರೀ ಮಂಜುನಾಥ ಮಣಿಪಾಲ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.