May 23, 2025 10:19:02 PM
WhatsApp Image 2023-11-15 at 3.44.49 PM

ಬೆಂಗಳೂರು: ಖ್ಯಾತ ನಟ ದರ್ಶನ್ ಮನೆಯ ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ನಟ ದರ್ಶನ್ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಗೆ ಹಾಜರಾಗಿದ್ದಾರೆ.

ಅಮಿತಾ ಜಿಂದಾಲ್​ ಎಂಬ ಮಹಿಳೆಗೆ ದರ್ಶನ್​ ಮನೆಯ ನಾಯಿ ಕಚ್ಚಿತ್ತು. ಹೀಗಾಗಿ ಅಮಿತಾ ಅವರು ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಬಳಿಕ ಪೊಲೀಸರು ಐಪಿಸಿ ಸೆಕ್ಷನ್​ 289ರ ಅಡಿಯಲ್ಲಿ ಕೇಸ್​ ದಾಖಲು ಮಾಡಿಕೊಳ್ಳಲಾಗಿತ್ತು.

ನಟ ದರ್ಶನ್‌ ಅವರನ್ನು ಈ ಪ್ರಕರಣದಲ್ಲಿ ಎ2 ಆರೋಪಿಯನ್ನಾಗಿ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಠಾಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ಪೊಲೀಸರು ದರ್ಶನ್‌ಗೆ ನೋಟಿಸ್​ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆಗೆ ದರ್ಶನ್‌ ಭೇಟಿ ನೀಡಿದ್ದು, ಹೇಳಿಕೆ ನೀಡಿದ್ದಾರೆ.ಈ ಕುರಿತು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಅಮಿತಾ ಅವರು ದೂರಿನ ಜತೆ ನೀಡಿದ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲನೆ ನಡೆಸಿದ್ದಾರೆ.

ತನಿಖೆಯನ್ನು ಚುರುಕುಗೊಳಿಸಿ, ನಟ ದರ್ಶನ್‌ ಅವರಿಗೆ ಪೊಲೀಸ್ ಠಾಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದರು. ಈ ಸಂಬಂಧ ನಟ ದರ್ಶನ್‌ ಅವರು ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಗೆ ಹಾಜರಾಗಿ ಹೇಳಿಕೆಯನ್ನು ನೀಡಿದ್ದಾರೆ. ಅದರನ್ವಯ ಪೊಲೀಸರು ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>