ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ 2000 ರೂ. : ಪ್ರಿಯಾಂಕಾ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ 2000 ರೂ. ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ಬಳಿ ಕಾಂಗ್ರೆಸ್​ ಆಯೋಜಿಸಿರುವ ‘ನಾ ನಾಯಕಿ’ ಸಮಾವೇಶದಲ್ಲಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸಮ್ಮುಖದಲ್ಲಿ ಡಿ.ಕೆ. ಶಿವಕುಮಾರ್ ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ 2000 ರೂ. ನೀಡಲಾಗುವುದು, ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಬೆಲೆ ಏರಿಕೆಯ ಸಂಕಷ್ಟದಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಹೀಗಾಗಿ ಇಡೀ ಕುಟುಂಬದ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರಿಗಾಗಿ ಈ ಕೊಡುಗೆ ನೀಡುತ್ತಿದ್ದೇವೆ ಎಂದರು.

Check Also

ಶಿರೂರು ಗುಡ್ಡ ಕುಸಿತ: ಶೋಧ ಕಾರ್ಯ ಕ್ಕೆ ಈಶ್ವರ್ ಮಲ್ಪೆ ತಂಡ ಭೇಟಿ

ಶಿರೂರು: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು ನೀರಿನಲ್ಲಿನಲ್ಲಿ ಮುಳುಗಿರುವ ಟ್ರಕ್ ಅನ್ನು ನೀರಿನಿಂದ …

Leave a Reply

Your email address will not be published. Required fields are marked *

You cannot copy content of this page.