ಈ ಪ್ರಶಸ್ತಿ ‘ದೈವಕ್ಕೆ’ ಸಲ್ಲಬೇಕು : ರಾಷ್ಟೀಯ ‘ಅತ್ಯುತ್ತಮ ನಟ’ ಪ್ರಶಸ್ತಿ ಪಡೆದ ಬಳಿಕ ರಿಷಬ್ ಶೆಟ್ಟಿ

ಬೆಂಗಳೂರು : 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರನ್ನ ಘೋಷಿಸಲಾಗಿದ್ದು, 2022 ರಿಂದ ಚಿತ್ರರಂಗದಲ್ಲಿ ಅತ್ಯುತ್ತಮವಾದುದನ್ನ ಆಚರಿಸಲಾಗುತ್ತಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ನವದೆಹಲಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ವಿಜೇತರನ್ನು ಬಹಿರಂಗಪಡಿಸಿತು. ಕನ್ನಡಿಗ, ನಟ ರಿಶಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಇನ್ನು ಪ್ರಶಸ್ತಿ ಬಂದಿರುವ ಕುರಿತು ನಟ ನಿರ್ದೇಶಕ ರಿಷಬ್ ಶೆಟ್ಟಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಪ್ರಶಸ್ತಿ ಘೋಷಣೆ ಮಾಡುವಾಗಲೇ ಪ್ರಶಸ್ತಿ ಬಂದಿರುವುದು ಗೊತ್ತಾಗಿದೆ. ಸಿನಿಮಾವನ್ನು ಜನ ನೋಡಿ ಮೆಚ್ಚುವುದು ಮುಖ್ಯವಾಗಿದೆ. ನಮ್ಮ ಸಿನಿಮಾ ತಂಡಕ್ಕೂ ಅಭಿನಂದನೆ ಹೇಳುತ್ತೇನೆ. ಕಾಂತಾರ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದ್ದಕ್ಕೆ ಖುಷಿಯಾಗಿದೆ. ಈ ಒಂದು ಪ್ರಶಸ್ತಿಯನ್ನು ನಾನು ದೈವಕ್ಕೆ ಅರ್ಪಿಸುತ್ತಿದ್ದೇನೆ ಎಂದು ತಿಳಿಸಿದರು. ಇಡೀ ಚಿತ್ರತಂಡಕ್ಕೆ ಈ ಪ್ರಶಸ್ತಿಯನ್ನು ಅರ್ಪಿಸುತ್ತೇನೇ. ಈ ಪ್ರಶಸ್ತಿಯಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ನನ್ನ ಪತ್ನಿಗೂ ಕೂಡ ಧನ್ಯವಾದ ಹೇಳುತ್ತೇನೆ. ಸಿನಿಮಾವನ್ನು ಜನ ನೋಡಿ ಮೆಚ್ಚುವುದು ಮುಖ್ಯವಾಗಿದೆ. ತುಂಬಾ ಜನ ಕರೆ ಮಾಡಿ ನನಗೆ ಶುಭಾಶಯ ತಿಳಿಸಿದ್ದಾರೆ ಎಂದು ನಟ ರಿಷಬ್ ಶೆಟ್ಟಿ ತಿಳಿಸಿದರು. ಇನ್ನು ಕನ್ನಡದ ಕಾಂತಾರ ಸಿನಿಮಾಗೆ ಎರಡು ಪ್ರಶಸ್ತಿ ಲಭಿಸಿದ್ದು, ಒಂದು ಕಾಂತಾರ ಸಿನಿಮಾ ನಟನೆಗಾಗಿ ನಟ ರಿಶಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಇನ್ನೊಂದು ಅತ್ಯುತ್ತಮ ಮನರಂಜನಾ ಸಿನಿಮಾ ಪ್ರಶಸ್ತಿ ಕೂಡ ಕಾಂತಾರ ಸಿನಿಮಾ ಪಾಲಾಗಿದೆ. ಇನ್ನು ಕನ್ನಡದ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಕೂಡ ಕನ್ನಡಿಗರ ಪಾಲಾಗಿದ್ದು, ಕೆಜೆಎಫ್‍ಪ್ರಶಸ್ತಿ ಲಭಿಸಿದೆ.

Check Also

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು …

Leave a Reply

Your email address will not be published. Required fields are marked *

You cannot copy content of this page.