ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಗೂಡಾಂಗಡಿಗೆ ನುಗ್ಗಿದ ಲಾರಿ; ಓರ್ವನಿಗೆ ಗಂಭೀರ ಗಾಯ

ಕಾಪು: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಗೂಡಂಗಡಿಯೊಳಗೆ ನುಗ್ಗಿದ ಘಟನೆ ಕಾಪುವಿನಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ರ ಕಾಪು ಪೆಟ್ರೋಲ್ ಪಂಪ್ ಬಳಿಯ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಘಟನೆ ಸಂಭವಿಸಿದೆ. ಲಾರಿಯು ಮಂಗಳೂರಿನಿಂದ ಉಡುಪಿ ಕಡೆಗೆ ಸಂಚಾಸುತ್ತಿದ್ದು, ಗೂಡಂಗಡಿಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಫ್ಲೈ ಓವರ್‌ನಲ್ಲಿ ವಾಹನ ಓಡಾಟವನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ವಾಹನಗಳು ಸರ್ವೀಸ್ ರಸ್ತೆಯಲ್ಲೇ ಸಂಚಾರ ನಡೆಸುತ್ತಿವೆ. ಈ ವೇಳೆ ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಲಾರಿ ಗೂಡಂಗಡಿಗೆ ನುಗ್ಗಿದೆ.

ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಪು ಶಾಸಕ ಲಾಲಾಜಿ‌ ಆರ್. ಮೆಂಡನ್ ಕೂಡಾ ಭೇಟಿ ನೀಡಿದ್ದು, ಅಂಗಡಿ‌ ಮಾಲಕರಿಗೆ ಸಾಂತ್ವನ ಹೇಳಿದ್ದಾರೆ.

Check Also

ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …

Leave a Reply

Your email address will not be published. Required fields are marked *

You cannot copy content of this page.