March 16, 2025
WhatsApp Image 2025-02-17 at 10.23.24 AM

ಮೂಡುಬಿದಿರೆ: ಇಲ್ಲಿನ ಅಳಿಯೂರಿನಲ್ಲಿರುವ ಪಾಕತಜ್ಞರೊಬ್ಬರ ಮನೆಗೆ ಹಾಡಹಗಲೇ ನುಗ್ಗಿದ ದರೋಡೆಕೋರರು ಮನೆಯ ಕಪಾಟಿನಲ್ಲಿದ್ದ 3.50 ಲಕ್ಷ ರೂ. ನಗದು ಹಾಗೂ 20 ಪವನ್ ಚಿನ್ನಾಭರಣವನ್ನು ದೋಚಿದ ಘಟನೆ ರವಿವಾರ ನಡೆದಿದೆ.

ಅಳಿಯೂರಿನ ನೇಲಡೆಯ ನಿವಾಸಿ, ಖ್ಯಾತ ಪಾಕತಜ್ಞ ಪ್ರಶಾಂತ್ ಜೈನ್ ಅವರ ಮನೆಯಲ್ಲಿ ಈ ದರೋಡೆ ನಡೆದಿದೆ. ಈ ಸಂದರ್ಭ ಮನೆಯಲ್ಲಿ ಅವರ ಪುತ್ರಿಯ ಹೊರತು ಬೇರೆ ಯಾರೂ ಇರಲಿಲ್ಲ. ಪ್ರಶಾಂತ್ ಮತ್ತು ಅವರ ಪುತ್ರ ಮುಲ್ಕಿಯಲ್ಲಿ ಅಡುಗೆ ಕೆಲಸಕ್ಕೆ ಹೋಗಿದ್ದು, ಪತ್ನಿ ಶಿರ್ತಾಡಿಯಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಹೋಗಿದ್ದರು. ಇದನ್ನು ಅರಿತ ದರೋಡೆಕೋರರು ಆ ಮನೆಯೊಳಗೆ ನುಗ್ಗಿದ್ದಾರೆ.

ಕಪಾಟು ತೆರೆಯುವ ಸದ್ದು ಕೇಳಿ ಯುವತಿ ಬಂದು ನೋಡಿದಾಗ ಬೊಬ್ಬೆ ಹೊಡೆಯದಂತೆ ಬಾಯಿಗೆ ಒತ್ತಿ ಹಿಡಿದರೆನ್ನಲಾಗಿದೆ. ಅಲ್ಲದೆ ಆಕೆಗೆ ಸ್ಪ್ರೇ ಸಿಂಪಡಿಸಿ ಪ್ರಜ್ಞೆ ತಪ್ಪಿಸಿ 3.50ಲಕ್ಷದಷ್ಟು ನಗದು ಮತ್ತು 20ಪವನ್ ಚಿನ್ನಾಭರಣವನ್ನು ದೋಚಿದ್ದಾರೆ ಎಂದು ದೂರಲಾಗಿದೆ. ಬೆಳಗ್ಗೆ 10.30 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಮಧ್ಯಾಹ್ನ 12.30ಕ್ಕೆ ನೆರೆಮನೆಯ ಸಂಬಂಧಿಕ ಮಹಿಳೆ ಮನೆಗೆ ಬಂದ ಬಳಿಕವೇ ಪಾಕತಜ್ಞರ ಪುತ್ರಿ ಎಚ್ಚರಗೊಂಡು ನಡೆದ ಘಟನೆಯನ್ನು ವಿವರಿಸಿದ್ದಾಳೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪಣಂಬೂರು ಎಸಿಪಿ ಶ್ರೀಕಾಂತ್‌, ಮೂಡುಬಿದಿರೆ ಇನ್ ಸ್ಪೆಕ್ಟರ್ ಸಂದೇಶ್ ಪಿ.ಜಿ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶ್ವಾನದಳ, ಪ್ರಾಯೋಗಿಕ ವಿಧಿ ವಿಜ್ಞಾನದವರೂ ಭೇಟಿ ನೀಡಿದ್ದು ತನಿಖೆ ನಡೆಯುತ್ತಿದೆ.

ಮನೆಯೊಳಗಡೆ ನುಗ್ಗಿರುವ ಇಬ್ಬರು ಮುಸುಕುಧಾರಿಗಳು ಎಂದು ತಿಳಿದುಬಂದಿದೆ. ಸ್ಥಳೀಯರು ಅಥವಾ ಮನೆಯ ಬಗ್ಗೆ ಬಲ್ಲವರೇ ಈ ಕೃತ್ಯವೆಸಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.