ಶಿರೂರು ಗುಡ್ಡ ಕುಸಿತ: ಈಶ್ವರ್​ ಮಲ್ಪೆಗೆ ನದಿಯಲ್ಲಿ ಸಾಮಾಗ್ರಿ ಪತ್ತೆ|ಅರ್ಜುನ್​ ಲಾರಿಯದ್ದಾ?

ಶಿರೂರು: ಗುಡ್ಡ ಕುಸಿತದಲ್ಲಿ ಕೇರಳದ ಲಾರಿ ಡ್ರೈವರ್​ ಅರ್ಜುನ್ ನಾಪತ್ತೆಯಾಗಿದ್ದರು. ಅಂದು ಗಂಗಾವಳಿ ನೀರಿನ ರಭಸ ಜೋರಿದ್ದ ಕಾರಣ ಅರ್ಜುನ್​ ಮತ್ತು ಲಾರಿಯನ್ನು ಹುಡುಕಲು ರಕ್ಷಣಾ ತಂಡಕ್ಕೆ ಸಾಧ್ಯವಾಗಿರಲಿಲ್ಲ. ಕೊನೆಗೆ ಮುಳುಗು ತಜ್ಞ ಈಶ್ವರ್​ ಮಲ್ಪೆ ನೀರಿಗೆ ಇಳಿದು ಅರ್ಜುನ್​ಗಾಗಿ ಹುಡುಕಾಡಿದರು. ಕೊಟ್ಟ ಮಾತಿಗೆ ತಪ್ಪದ ಈಶ್ವರ್​ ಮಲ್ಪೆ ಮತ್ತೆ ಗಂಗಾವಳಿ ನೀರಿಗೆ ಇಳಿದಿದ್ದಾರೆ. ಈ ವೇಳೆ ಲಾರಿ ಜಾಕ್ ಜೊತೆಗೆ ಲೋಹದ ಸಾಮಾಗ್ರಿ ಪತ್ತೆಯಾಗಿದೆ. ಆದರೀಗ ಪತ್ತೆಯಾದ ಸಾಮಾಗ್ರಿ​​ ಕುರಿತಾಗಿ ಅಚ್ಚರಿಯ ಮಾಹಿತಿ ಹೊರಬಿದ್ದಿದೆ.

ಶುಕ್ರವಾರದಂದು ಈಶ್ವರ್​ ಮಲ್ಪೆ ನದಿ ಆಳಕ್ಕೆ ಹೋಗಿ 15 ಕೆಜಿ ತೂಕದ ಸಾಮಾಗ್ರಿಯೊಂದನ್ನು ಪತ್ತೆಹಚ್ಚಿ ತೆಗೆದುಕೊಂಡು ದಡಕ್ಕೆ ಬಂದಿದ್ದರು. ಆದರೀಗ ಈ ಸಾಮಾಗ್ರಿ​ ಅರ್ಜುನ್​ ಲಾರಿಯದ್ದಲ್ಲ ಎಂಬ ಸತ್ಯ ಹೊರಬಿದ್ದಿದೆ. ಲಾರಿ ಮಾಲೀಕ ಇದು ತನ್ನ ಲಾರಿಯದ್ದಲ್ಲ ಎಂದು ಹೇಳಿದ್ದಾರೆ. ಲಾರಿ ಸಾಮಾಗ್ರಿ​ ಪತ್ತೆಯಾದಾಗಿನಿಂದ ಸ್ಥಳೀಯರಿಗೆ ಮತ್ತೊಂದು ಅನುಮಾನ ಹುಟ್ಟಿಕೊಂಡಿದೆ. ನೀರಿನಡಿಯಲ್ಲಿ ಮತ್ತೊಂದು ಲಾರಿ ಇದೆಯಾ ಎಂಬ ಪ್ರಶ್ನೆ ಕಾಡಿದೆ. ಇನ್ನು ಶಿರೂರು ಗುಡ್ಡ ಕುಸಿತದಲ್ಲಿ 3 ಗ್ಯಾಸ್​​ ಟ್ಯಾಂಕರ್​ ನದಿ ಪಾಲಾಗಿತ್ತು. ಆ ಮೂರರಲ್ಲಿ ಒಂದು ಲಾರಿಯ ಸಾಮಾಗ್ರಿ​ ಇದಾಗಿದೆ ಎನ್ನಲಾಗುತ್ತಿದೆ. ಇದರ ಜೊತೆಗೆ ಈ ಸಾಮಾಗ್ರಿ​ ಹಲವು ಅನುಮಾನಗಳಿಗೆ ಕಾರಣವಾಗಿದೆ.

Check Also

ಕಾರ್ಕಳ : ಶಾಲೆಯಲ್ಲಿ ಈದ್‌ ಮಿಲಾದ್‌ ಆಚಣೆ- ಪೋಷಕರಿಂದ ಆಕ್ರೋಶ

ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್‌ ಮಿಲಾದ್‌ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾಗಿದೆ. ಸಚ್ಚರಿಷೇಟೆಯ …

Leave a Reply

Your email address will not be published. Required fields are marked *

You cannot copy content of this page.