October 18, 2024
WhatsApp Image 2024-07-18 at 10.05.54 AM

ಕಾರವಾರ: ಶಿರೂರಿನ  ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ದುರಂತದಲ್ಲಿ 10 ಮಂದಿ ಕಣ್ಣರೆಯಾಗಿದ್ದು, ಇದುವರೆಗೆ 6 ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಹೇಳಿದರು.

ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಶಿರೂರಿನ ಒಂದೇ ಕುಟುಂಬದ ನಾಲ್ಕು ಮತ್ತು ಅದೇ ಕುಟುಂಬದ ಸಂಬಂಧಿ ಜಗನ್ನಾಥ, ಉಳುವರೆ ಗ್ರಾಮದ ಸಣ್ಣಿ ಗೌಡ, ಮೂರು ಟ್ಯಾಂಕರ್ ಹಾಗೂ ಒಂದು ಲಾರಿಯ ಚಾಲಕ ಕಣ್ಮರೆಯಾಗಿರುವುದಾಗಿ ಅವರ ಕುಟುಂಬಗಳು ಮಾಹಿತಿ ನೀಡಿವೆ. ಈ ಪೈಕಿ ಶಿರೂರಿನ ನಾಲ್ವರು, ತಮಿಳುನಾಡಿನ ನಾಮಕ್ಕಲ್’ನ ಚಿಣ್ಣನನ್ ಎಂಬ ಟ್ಯಾಂಕರ್ ಚಾಲಕನ ಮೃತದೇಹ ಪತ್ತೆಯಾಗಿದೆ. ಇನ್ನೊಂದು ಮೃತದೇಹದ ಗುರುತು ಪತ್ತೆ ಕಾರ್ಯ ನಡದಿದೆ’ ಎಂದು ಗುರುವಾರ ಮಾಧ್ಯಮಗಳಿಗೆ ತಿಳಿಸಿದರು.

About The Author

Leave a Reply

Your email address will not be published. Required fields are marked *

You cannot copy content of this page.