ಉಡುಪಿ: ಸಗ್ರಿ ರೈಲ್ವೆ ಸೇತುವೆ ಬಳಿ ಮೃತದೇಹ ಪತ್ತೆ..!

ಉಡುಪಿ: ನಗರದ ಸಗ್ರಿ ರೈಲು ಸೇತುವೆ ಸಮೀಪದ ರೈಲು ಹಳಿಯ ಬಳಿ ವ್ಯಕ್ತಿಯೊಬ್ಬರ ಮೃತದೇಹ ಬುಧವಾರ ತಡರಾತ್ರಿ ಪತ್ತೆಯಾಗಿದೆ.

ಮೃತವ್ಯಕ್ತಿಯನ್ನು ಉಡುಪಿ ಮೂಡಬೆಟ್ಟು ನಿವಾಸಿ ಪ್ರಸಾದ್ ಆಚಾರ್ಯ ಎಂದು ಗುರುತಿಸಲಾಗಿದೆ. ವ್ಯಕ್ತಿಯ ತಲೆ ಭಾಗ ಛಿದ್ರಗೊಂಡಿದ್ದು, ರೈಲು ಬಡಿದು ಅಥವಾ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಣಿಪಾಲ ಠಾಣೆಯ ಎಸ್ ಐ ರಾಘವೇಂದ್ರ ಸಿ ಹಾಗೂ  ತಂಡ ಮಹಜರು ಪ್ರಕ್ರಿಯೆ ನಡೆಸಿದರು. ಬಳಿಕ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ ಮೃತದೇಹವನ್ನು ಮಣಿಪಾಲದ ಶವಗಾರಕ್ಕೆ ರವಾನಿಸಲಾಯಿತು. ಸ್ಥಳದಲ್ಲಿ ಆಧಾರ್ ಚೀಟಿ ಪತ್ತೆಯಾಗಿದೆ. ಮಣಿಪಾಲ ಪೋಲಿಸರು ಮತ್ತು ರೈಲ್ವೆ ಪೋಲಿಸರು ಕಾನೂನು ಪ್ರಕ್ರಿಯೆ ನಡೆಸಿದರು.

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.