ಉಡುಪಿ ತಾಲೂಕು, ಹದಿಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ನವಂಬರ್ 25,26ರಂದು ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನ ಭವಾನಿ ಮಂಟಪದ ಡಾ.ಮುರಾರಿ ಬಲ್ಲಾಳ್ ವೇದಿಕೆಯಲ್ಲಿ ನಡೆಯಲಿರುವ ಉಡುಪಿ ತಾಲೂಕು ಹದಿಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಉಡುಪಿ ಜಿಲ್ಲಾಧಿಕಾರಿ ಶ್ರೀ ಕೂರ್ಮ ಎಂ ರಾವ್ ಬಿಡುಗಡೆಗೊಳಿಸಿದರು.

ಹಿರಿಯ ಸಾಹಿತಿ ಟಿ. ತಿರುಮಲೇಶ್ವರ ಭಟ್ ಅಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನವನ್ನು ಸಾಹಿತಿ ವೀಣಾ ಬನ್ನಂಜೆ ಉದ್ಘಾಟಿಸಲಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಪರೀಕ್ಷಾರ್ಥಿ ಭಾರತೀಯ ಆಡಳಿತ ಸೇವಾಧಿಕಾರಿ ಯತೀಶ್ ಆರ್, ಉಡುಪಿ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್. ಪಿ, ಕಾರ್ಯದರ್ಶಿ ಜನಾರ್ದನ್ ಕೊಡವೂರು ಉಪಸ್ಥಿತರಿದ್ದರು.

Check Also

ಶಿರಾಡಿಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ : ರಾಷ್ಟ್ರೀಯ ಹೆದ್ದಾರಿ ಬಂದ್, ಸಂಚಾರ ಸಂಪೂರ್ಣ ಸ್ಥಗಿತ..!

ಹಾಸನ: ಭಾರೀ ಮಳೆಗೆ ಸಕಲೇಶಪುರ ಎತ್ತಿನಹಳ್ಳದ ಸಮೀಪ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ …

Leave a Reply

Your email address will not be published. Required fields are marked *

You cannot copy content of this page.