ಕಿನ್ನಿಗೋಳಿ: ಬೈಕ್‌ ಮತ್ತು ಆಟೋ ಡಿಕ್ಕಿ; ಸವಾರ ಮೃತ್ಯು

ಕಿನ್ನಿಗೋಳಿ: ಪೆಟ್ರೋಲ್‌ ಬಂಕ್‌ ಬಳಿ ಬೈಕ್‌ ಸವಾರನೋರ್ವ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡು ಸಾವನ್ನಪ್ಪಿದ ಘಟನೆ ಮಂಗಳೂರಿನ ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯ ಕೊಯಿಕುಡೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಮೃತ ಬೈಕ್ ಸವಾರನನ್ನು ಕೊಲ್ನಾಡು ಸಸಿತೋಟ ನಿವಾಸಿ ಶರತ್ ಶೆಟ್ಟಿ (49) ಎಂದು ಗುರುತಿಸಲಾಗಿದೆ. ಮೃತ ಶರತ್ ಶೆಟ್ಟಿ ಹಳೆಯಂಗಡಿಯ ಸಂಸ್ಥೆಯೊಂದರಲ್ಲಿ ಚಾಲಕನಾಗಿ ದುಡಿಯುತ್ತಿದ್ದು ಕೆಲಸ ಮುಗಿಸಿ ವಾಪಸ್ಬರುವ ವೇಳೆ ಪಕ್ಷಿಕೆರೆ ಕೊಯಿಕುಡೆ ಪೆಟ್ರೋಲ್ ಬಂಕ್ ಬಳಿ ವಿರುದ್ಧ ದಿಕ್ಕಿನಿಂದ ಬಂದ ಆಟೋಗೆ ಡಿಕ್ಕಿ ಹೊಡೆದಿದ್ದಾರೆ.

ಅಪಘಾತದ ರಭಸಕ್ಕೆ ಶರತ್ ಶೆಟ್ಟಿಯವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆ ಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಅಪಘಾತದಿಂದ ಆಟೋ ಹಾಗೂ ಬೈಕ್ ಜಖಂಗೊಂಡಿದೆ.

ಮೃತ ಶರತ್ ಕೊಲ್ನಾ ಡು ಸಸಿತೋಟ ನಿವಾಸಿಯಾಗಿದ್ದು, ಪಕ್ಷಿಕೆರೆಯಲ್ಲಿ ಪ್ಲಾಟ್‌ನಲ್ಲಿ ವಾಸವಿದ್ದರು, ಈ ಹಿಂದೆ ಮುಂಬೈನಲ್ಲಿ ವಾಸ್ತವ್ಯವಿದ್ದು ಇತ್ತೀಚೆಗಷ್ಟೇ ಊರಿನಲ್ಲಿ ನೆಲೆಸಿದ್ದರು. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

BIG NEWS: ವಿಧಾನಸಭೆಯಲ್ಲಿ ಶಾಸಕಿ ನಯನಾ ಮೋಟಮ್ಮ ‘ಸಿಎಂ ಆಸನ’ದ ಮೇಲೆ ಕುಳಿತು ಮಹಾ ಯಡವಟ್ಟು

ಬೆಳಗಾವಿ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡೋದಕ್ಕೆ ವಿಧಾನಸಭೆಯ ಸದನಕ್ಕೆ ತೆರಳಿದ್ದಂತ ಮೂಡುಗೆರೆ ಶಾಸಕಿ ನಯನಾ ಮೋಟಮ್ಮ …

Leave a Reply

Your email address will not be published. Required fields are marked *

You cannot copy content of this page.