ಪರ್ಯಾಯ ಶ್ರೀಪಾದರಿಂದ “ಕೋಟಿ ತುಳಸಿ ಅರ್ಚನೆ”ಯ ಕರಪತ್ರ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯ ಹಾಗೂ ಅನುಜ್ಞೆಯ ಮೇರೆಗೆ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾಸಭಾ ಕಡಿಯಾಳಿ ಶಾಖೆಯ ನೇತೃತ್ವದಲ್ಲಿ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಬ್ರಾಹ್ಮಣ ಸಮುದಾಯದ ಸಹಾಯ ಸಹಕಾರದೊಂದಿಗೆ ಉಡುಪಿಯ ರಾಜಾಂಗಣದಲ್ಲಿ ಡಿಸೆಂಬರ್ 31, 2023 ರವಿವಾರದಂದು ನಡೆಯಲಿರುವ ಋಕ್ಮಿಣೀಕರಾರ್ಚಿತ ಶ್ರೀಕೃಷ್ಣನಿಗೆ ಶ್ರೀ ವಿಷ್ಣು ಸಹಸ್ರ ನಾಮಾವಳೀ ಸಹಿತ “ಕೋಟಿ ತುಳಸಿ ಅರ್ಚನೆ” ಯ ಆಮಂತ್ರಣ ಪತ್ರಿಕೆ ಹಾಗೂ ಈ ಬಗ್ಗೆ ಶ್ರೀಮಠದಿಂದ ಪ್ರಕಟಿತ ಮನವಿಯ ಕರಪತ್ರವನ್ನು ಪರ್ಯಾಯ ಮಠದ ಪರಮ ಪೂಜ್ಯ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿ ಎಲ್ಲಾ ಬ್ರಾಹ್ಮಣ ವರ್ಗ ಈ ಪುಣ್ಯ ಕೈಂಕರ್ಯದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮುಕ್ತ ಮನಸ್ಸಿನಿಂದ ಭಾಗವಹಿಸಬೇಕು ಎ೦ದು ಕರೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸನ್ನು ಹಾರೈಸಿದರು. ಈ ಸಂದಭ೯ದಲ್ಲಿ ತುಶಿಮಾಮ ದ ಗೌರವಾಧ್ಯಕ್ಷ ಶ್ರೀ ಅರವಿಂದಾಚಾರ್ಯ, ಅಧ್ಯಕ್ಷ ರವಿ ಪ್ರಕಾಶ್ ಭಟ್, ಕಡಿಯಾಳಿ ಶಾಖೆಯ ಅಧ್ಯಕ್ಷ ರಘುಪತಿ ಉಪಾಧ್ಯ ಕಾರ್ಯದರ್ಶಿ ರಾಜೇಶ್ ಭಟ್ ಪಣಿಯಾಡಿ ಹಾಗೂ ಕೋಶಾಧಿಕಾರಿ ಕೊರಂಗ್ರಪಾಡಿ ಕೃಷ್ಣಮೂರ್ತಿ ಆಚಾರ್ಯ, ಮಂಜುನಾಥರಾವ್ ಮತ್ತಿತರರು ಉಪಸ್ಥಿತರಿದ್ದರು.

Check Also

ರೋಟರಿ ಉಡುಪಿ: ವಿದ್ಯಾರ್ಥಿಗಳ ದತ್ತು ಸ್ವೀಕಾರ..!

ರೋಟರಿ ಉಡುಪಿ ವತಿಯಿಂದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವೈದ್ಯರ ದಿನಾಚರಣೆ, ಪತ್ರಿಕಾ ದಿನಾಚರಣೆ ಮತ್ತು ಲೆಕ್ಕಪರಿಶೋಧಕರ ದಿನಾಚರಣೆ ಕಾರ್ಯಕ್ರಮವು ಸೋಮವಾರ …

Leave a Reply

Your email address will not be published. Required fields are marked *

You cannot copy content of this page.