

ಮೂಲ್ಕಿ: ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ತಡರಾತ್ರಿ ನಡೆದಿದೆ.
Video Player
00:00
00:00
ಶನಿವಾರ ಬೆಳಗ್ಗಿನ ಜಾವ ಸುಮಾರು 1.40 ರಿಂದ 2 ಗಂಟೆ ವೇಳೆ ಬ್ರಹ್ಮರಥೋತ್ಸವ ತೇರಿನ ಮೇಲ್ಭಾಗ ಕುಸಿದು ಬಿದ್ದಿದೆ.
ಈ ಸಂದರ್ಭದಲ್ಲಿ ಅರ್ಚಕರು ತೇರಿನಲ್ಲೇ ಇದ್ದರು. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂಬ ಮಾಹಿತಿ ದೊರೆತಿದೆ.