ಫಾದರ್ಸ್ ಡೇ ದಿನವೇ ತನ್ನ ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ..!

ಕಲಬುರಗಿ : ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ, ಮೃತರನ್ನು ಚಿಂಚೋಳಿಯ ಕುಂಚಾವರಂನ ಹಣಮಂತ (36), ಅಕ್ಷತಾ (6) ಹಾಗೂ ಓಕಾಂ (9) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ.

ಹಣಮಂತ ಪತ್ನಿ ಹಾಗೂ ಮಕ್ಕಳೊಂದಿಗೆ ಹೈದ್ರಾಬಾದ್‍ನಲ್ಲಿ ವಾಸಿಸುತ್ತಿದ್ದ. ಒಂದು ವಾರದ ಹಿಂದಷ್ಟೆ ಪತಿ ಹಾಗೂ ಪತ್ನಿ ನಡುವೆ ಗಲಾಟೆ ನಡೆದು ಕುಂಚಾವರಂಗೆ ಬಂದಿದ್ದರು. ಅಲ್ಲದೇ ಈ ವಿಚಾರವಾಗಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪತ್ನಿ ದೂರು ದಾಖಲಿಸಿದ್ದಳು. ಬಳಿಕ ಪೊಲೀಸರು ಇಬ್ಬರನ್ನೂ ಕರೆಸಿ ಬುದ್ದಿ ಹೇಳಿ ಕಳಿಸಿದ್ದರು. ನಂತರ ಮತ್ತೆ ವಾಪಾಸ್ ಹೈದ್ರಾಬಾದ್‍ಗೆ ತೆರಳಿದ್ದರು.

Check Also

ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ

ಕೋಝೀಕೋಡ್(ಕೇರಳ): ಕೇರಳದ ಖಾಸಗಿ ಆಸ್ಪತ್ರೆಯೊಂದರಲ್ಲಿ 14 ವರ್ಷದ ಬಾಲಕನೊಬ್ಬ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್‌(ಮಿದುಳು ತಿನ್ನುವ ಅಮೀಬಾ) ಎಂಬ ಅಪರೂಪದ ಮಿದುಳು ಸೋಂಕಿನಿಂದ ಕೊನೆಯುಸಿರೆಳೆದಿರುವುದಾಗಿ …

Leave a Reply

Your email address will not be published. Required fields are marked *

You cannot copy content of this page.