ಬೆಳ್ತಂಗಡಿ: ತೋಟದ ಶೆಡ್‌ನಲ್ಲಿ ವ್ಯಕ್ತಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ..!

ಬೆಳ್ತಂಗಡಿ: ವ್ಯಕ್ತಿಯೋರ್ವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶಿಬಾಜೆ ಗ್ರಾಮದ ಗುತ್ತುಮನೆ ಎಂಬಲ್ಲಿ ನಡೆದಿದೆ.

ರಾತ್ರಿ ಶೆಡ್‌ನಲ್ಲಿ ಮಲಗಿದ್ದ ಶ್ರೀದರ್ ಮೃತದೇಹವು ಇಂದು ಬೆಳಗ್ಗೆ ತೋಟದ ಬದಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶ್ರೀಧರರಿಗೆ ಶನಿವಾರ ಸಂಜೆ ಮೂವರು ಸ್ಥಳೀಯರು ಹಲ್ಲೆ ನಡೆಸಿರುವುದನ್ನು ಸ್ಥಳೀಯರು ನೋಡಿದ್ದಾರೆ ಎನ್ನಲಾಗಿದೆ. ಬಳಿಕ ಶ್ರೀಧರ್ ತಾನು ಕೆಲಸ ಮಾಡುವ ಶೆಡ್‌ಗೆ ತೆರಳಿ ಮಲಗಿದ್ದು,ಆದರೆ ಬೆಳಗ್ಗೆ ಶ್ರೀಧರ ಶೆಡ್‌ನಲ್ಲಿ ಇಲ್ಲದಿರುವುದನ್ನು ಕಂಡು ಹುಡುಕಾಟ ನಡೆಸಿದಾಗ ತೋಟದ ಬದಿಯಲ್ಲಿ ಶ್ರೀಧರನ ಮೃತದೇಹ ಪತ್ತೆಯಗಿತ್ತು. ತೋಟದ ಬೇಲಿ ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಕಂಡು ಬಂದಿದ್ದು, ಹಲ್ಲೆ ನಡೆಸಿದ ತಂಡವೇ ರಾತ್ರಿ ಅಕ್ರಮವಾಗಿ ಶೆಡ್‌ಗೆ ಪ್ರವೇಶಿಸಿ ಶ್ರೀಧರ್‌ ಗೆ‌ ಕೊಲೆ ಮಾಡಿರುವ ಶಂಕೆ ಇದೆ. ಇದಲ್ಲದೆ ಶ್ರೀಧರ್ ಬಳಿಯಿದ್ದ 9500 ರೂ.ಗಳನ್ನು ದೋಚಿರುವುದಾಗಿ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ಕುರಿತು‌ ಧರ್ಮಸ್ಥಳ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.