![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಕಡಬ: ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಹಾಗೂ ಬ್ಯಾಗೊಂದು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ಪತ್ತೆಯಾಗಿದೆ. ಬಿಳಿನೆಲೆ ಗ್ರಾಮ ನಿವಾಸಿ ಚಂದ್ರಶೇಖರ್, (39) ಎಂಬವರು ದಿನಾಂಕ:19.04.2024ರಂದು ಬೆಳಿಗ್ಗೆ ನೆರೆ-ಕೆರೆಯ ನಿವಾಸಿಗಳೊಂದಿಗೆ, ಕಾಡಿನಲ್ಲಿ ಕಟ್ಟಿಗೆ ಸೌದೆಯನ್ನು ತರಲು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ತೆರಳುತ್ತಿದ್ದಾಗ, ದಾರಿಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಹಾಗು ಬ್ಯಾಗ್ ಕಂಡುಬಂದಿದ್ದು, ಸ್ವಲ್ಪ ದೂರದಲ್ಲಿ ಮರವೊಂದರಲ್ಲಿ ಬಟ್ಟೆಯೊಂದು ಮರದ ಕೊಂಬೆಯಿಂದ ನೇತಾಡುತ್ತಿರುವುದು ಕಂಡುಬಂದಿದೆ. ಕಾಡು ಪ್ರದೇಶದಲ್ಲಿ ಕೊಳೆತ ಮೃತದೇಹ ದೊರಕಿರುವ ಬಗ್ಗೆ ಸಂಶಯವಿರುವುದಾಗಿ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸು ಠಾಣೆಯಲ್ಲಿ ಯು ಡಿ ಆರ್ : 12/2024 ಕಲಂ:174 (3),(iv) CrPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.