

ವಿಟ್ಲ ಸಮೀಪದ 20 ಸ್ಥಾನಗಳಲ್ಲಿ 18 ಸ್ಥಾನಗಳನ್ನು ಹೊಂದಿ ಬಿ.ಜೆ.ಪಿ ಯ ಆಡಳಿತವಿರುವ ಪುಣಚ ಗ್ರಾಮ ಪಂಚಾಯತ್ ನ ವ್ಯಾಪ್ತಿಯಲ್ಲಿ ಬರುವ ಕೋಡಂಚಡ್ಕ ಬೈರಿಕಟ್ಟೆ ಎಂಬಲ್ಲಿ ಅನ್ಯಮತೀಯ ವ್ಯಕ್ತಿ ಅಬ್ದುಲ್ಲ ಮಾದುಮೂಲೆ ಎಂಬಾತ ಅಕ್ರಮವಾಗಿ ಕಟ್ಟಡ ಕಟ್ಟಿ ಅದರಲ್ಲಿ ಗೋ ಫಾರ್ಮ್ (ಭವಿಷ್ಯದ ಕಸಾಯಿಖಾನೆ) ಮಾಡಲು ಪ್ರಯತ್ನ ಮಾಡುತ್ತಿದ್ದಾನೆ, ಈ ಅಕ್ರಮ ಕಟ್ಟಡವನ್ನು ಸಕ್ರಮಗೊಳಿಸಲು ಪರವಾನಿಗೆ ನೀಡಲಾಗುತ್ತದೆ,ಈ ಅಕ್ರಮ ಕಟ್ಟಡಕ್ಕೆ ಪರವಾನಿಗೆ ನೀಡಲು ಸ್ಥಳೀಯ ಪ್ರಭಾವಿ ವ್ಯಕ್ತಿಯೊಬ್ಬರ ಹುನ್ನಾರವಿದೆ, ಈ ಅಕ್ರಮ ಕಟ್ಟಡವನ್ನು ತೆರವುಗೊಳಿಸಲು ಅವಕಾಶವಿದ್ದರೂ ಕೂಡ ಯಾವುದೇ ಕ್ರಮವನ್ನು ಪಂಚಾಯತ್ ಕೈಗೊಳ್ಳಲಿಲ್ಲ, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗು ಅಕ್ರಮವಾಗಿ ಕಟ್ಟಿರುವ ಕಟ್ಟಡವನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ದಿನಾಂಕ 19/06/2023 ರಂದು ಬೆಳಗ್ಗೆ ಪುಣಚ ಪಂಚಾಯತ್ ನ ಮುಂಭಾಗದಲ್ಲಿ ಹಿಂದೂ ಹೋರಾಟ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು,ಈ ಪ್ರತಿಭಟನೆಯಲ್ಲಿ ನೂರಾರು ಹಿಂದೂ ಕಾರ್ಯಕರ್ತರು ಹಾಗು ಪ್ರಮುಖರು ಉಪಸ್ಥಿತರಿದ್ದರು.