![n44359297616689160419038fa7ff9454df8ff626f3ccd4869375d55e9a580c2d1edf576ea3f3a9810ffdfc](https://i0.wp.com/thrishulnews.com/wp-content/uploads/2022/11/n44359297616689160419038fa7ff9454df8ff626f3ccd4869375d55e9a580c2d1edf576ea3f3a9810ffdfc.jpg?fit=1024%2C576&ssl=1?v=1668919328)
![](https://i0.wp.com/thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg?fit=1050%2C600&ssl=1)
ಮಂಗಳೂರು ಆಟೋ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ನಿಷೇಧಿತ ಪಿಎಫ್ಐ ಸಂಘಟನೆ ಮುಖಂಡನೋರ್ವನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇತ್ತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪಿಎಫ್ಐ ಮುಖಂಡ ಇಜಾಜ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದಿರುವ ಪಿಎಫ್ಐ ಮುಖಂಡ ಇಜಾಜ್ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನಿವಾಸಿ ಎಂದು ತಿಳಿದು ಬಂದಿದೆ. ಪಿಎಫ್ಐ ನಿಷೇಧವಾದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪಿಎಫ್ಐ ಮುಖಂಡರನ್ನು ಬಂಧಿಸಲಾಗಿತ್ತು. ಈ ವೇಳೆ ಬಂಧಿತನಾಗಿದ್ದ ಈತ 10 ದಿನಗಳ ಹಿಂದೆ ಜಾಮೀನಿನ ಮೇಲೆ ಹೊರ ಬಂದಿದ್ದನು. ಈ ಮಧ್ಯೆ ಇಂದು ದುಬೈಗೆ ಹಾರಲು ಪಿಎಫ್ಐ ಮುಖಂಡ ಇಜಾಜ್ ಪ್ಲಾನ್ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ.
ಆಟೋ ಸ್ಪೋಟದಲ್ಲಿ ಗಾಯಗೊಂಡಿರುವ ಅನುಮಾನಾಸ್ಪದ ವ್ಯಕ್ತಿ ಹಾಗೂ ಚಾಲಕ ಪುರುಷೋತ್ತಮ್ ಗೆ ಚಿಕಿತ್ಸೆ ಫಾದರ್ ಮುಲ್ಲಾರ್ ಆಸ್ಪತ್ರೆಯ ಐಸಿಯು ಬರ್ನಿಂಗ್ ವಾರ್ಡ್ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಐಸಿಯು ಹೊರಗೆ ಪೊಲೀಸರನ್ನು ನಿಯೋಜಿಸಲಾಗಿದೆ. ಚಾಲಕ ಪುರುಷೋತ್ತಮ್ ಪತ್ನಿ ಹಾಗೂ ಕುಟುಂಬಸ್ಥರನ್ನು ಸಹ ಪೊಲೀಸರು ಆಸ್ಪತ್ರೆಯೊಳಗೆ ಬಿಡುತ್ತಿಲ್ಲ.