ಮಂಗಳೂರು: ಇದೇ ಜು.23 ರಂದು ಪುತ್ತೂರು ತಾಲೂಕಿನ ನಿಡ್ಪಳ್ಳಿ, ಆರ್ಯಪ್ಪು, ಬಂಟ್ವಾಳ ತಾಲೂಕಿನ ಪುದು ಹಾಗೂ ಬೆಳ್ತಂಗಡಿ ತಾಲೂಕಿನ ಉಜಿರೆ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್ಗಳ ಚುನಾವಣೆ /ಉಪಚುನಾವಣೆಗೆ ಮತದಾನ ನಡೆಯಲಿದೆ ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಪ್ರಕ್ರಿಯೆ ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಜು.21ರ ಸಂಜೆ 5 ಗಂಟೆಯಿಂದ ಚುನಾವಣೆ ಮುಕ್ತಾಯವಾಗುವವರೆಗೆ 3 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯಮುಕ್ತ ದಿನ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಈ ದಿನಗಳಂದು ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮತ್ತು ಮದ್ಯ ಮಾರಾಟದ ಪರವಾನಿಗೆ ಇರುವ ಅಂಗಡಿಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು, ಹೋಟೆಲ್ಗಳು, ನಾನ್ ಪ್ರೊಪ್ರೈಟರ್ಗಳಲ್ಲಿ ಹಾಗೂ ಸ್ಟಾರ್ ಹೋಟೆಲ್ಗಳಲ್ಲಿ ಮದ್ಯ ಮಾರಾಟ ಮತ್ತು ಸರಬರಾಜು ಮಾಡುವುದು ನಿಷೇಧಿಸಲಾಗಿರುತ್ತದೆ.
Check Also
ಕೇರಳದಲ್ಲಿ ‘ವೆಸ್ಟ್ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …