ಶಕ್ತಿ ಯೋಜನೆಯಿಂದ ನಷ್ಟ- ಜುಲೈ 27ರಂದು ರಾಜ್ಯಾದ್ಯಂತ ಆಟೋ, ಕ್ಯಾಬ್, ಖಾಸಗಿ ಬಸ್ ಬಂದ್ ಗೆ ಕರೆ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಸಾರಿಗೆ ಸಂಸ್ಥೆಗಳು ಸಿಡಿದೆದ್ದಿವೆ. ಮಹಿಳೆಯರಿಗೆ ಉಚಿತ ಪ್ರಯಾಣದ ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ವಿರುದ್ಧ ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆಗಳು ಸಿಡಿದೆದ್ದಿದ್ದು, ಜುಲೈ 27 ರಂದು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದೆ. ಇದರಿಂದಾಗಿ ಜು.26ರ ಮಧ್ಯರಾತ್ರಿ 12 ರಿಂದ 27ರ ಮಧ್ಯರಾತ್ರಿಯ ವರೆಗೂ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್‌ಗಳು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ.

ರಾಜ್ಯದ 23 ಸಾರಿಗೆ ಸಂಘಟನೆಗಳು ಬಂದ್‌ ಗೆ ಬೆಂಬಲ ವ್ಯಕ್ತಪಡಿಸಿವೆ. ಜುಲೈ 27ರಂದು ಬೆಳಿಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಜಾಥಾ ನಡೆಸುವ ಮೂಲಕ ಸರ್ಕಾರ ಗಮನ ಸೆಳೆಯಲು ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ನಿರ್ಧರಿಸಿದೆ.

ರಾಜ್ಯ ಸರ್ಕಾರದ ಕೆಲವು ನೀತಿಗಳಿಂದ ಖಾಸಗಿ ಸಾರಿಗೆಗೆ ನಷ್ಟವಾಗುತ್ತಿದೆ. ಶಕ್ತಿ ಯೋಜನೆ, ವೈಟ್ ಬೋರ್ಡ್ ವಾಹನವನ್ನು ವಾಣಿಜ್ಯ ವಾಹನವಾಗಿ ಉಪಯೋಗಿಸುತ್ತಿರುವುದು, ದ್ವಿಚಕ್ರ ವಾಹನಗಳಿಗೆ ಮುಕ್ತ ಪರವಾನಿಗೆ ನೀಡುತ್ತಿರುವುದು ಸೇರಿದಂತೆ ಹಲವು ಯೋಜನೆಗಳಿಂದ ಖಾಸಗಿ ಸಾರಿಗೆ ನೆಲ ಕಚ್ಚಿ ಹೋಗಿದೆ ಎಂದು ಖಾಸಗಿ ಸಾರಿಗೆ ಮಾಲೀಕರು ಆರೋಪಿಸಿದ್ದಾರೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.