ಕಾರ್ಕಳ: ತೆಂಗಿನ ಮರ ಬಿದ್ದು ಮನೆಗೆ ಹಾನಿ, ಅಪಾರ ನಷ್ಟ..!

ಉಡುಪಿ ಜಿಲ್ಲೆಯಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಕಾರ್ಕಳದ ಭುವನೇಂದ್ರ ಕಾಲೇಜು ಸಮೀಪದ ಮನೆಯೊಂದಕ್ಕೆ ತೆಂಗಿನ ಮರ ಬಿದ್ದು ಹಾನಿ ಉಂಟಾದ ಘಟನೆ ಜು.21ರಂದು ನಡೆದಿದೆ.

ಕಾರ್ಕಳ ನಗರದ ಭುವನೇಂದ್ರ ಕಾಲೇಜು ಸಮೀಪದ ನಿವಾಸಿ ಜಯರಾಜ್ ರವರ ಮನೆಗೆ ತೆಂಗಿನ ಮರ ಬಿದ್ದು, ಹಾನಿಯುಂಟಾಗಿದೆ.

ವಾಸದ ಮನೆಗೆ ತೆಂಗಿನಮರ ಮುರಿದು ಬಿದ್ದು ಅಂಶಿಕ ಹಾನಿ ಉಂಟಾಗಿದೆ.ಇದರಿಂದ 50,000 ರೂ. ಅಂದಾಜು ನಷ್ಟ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಆಗಮಿಸಿ ಪರಿಹಾರ ಕಾರ್ಯ ನಡೆಸುತ್ತಿದ್ದಾರೆ.

Check Also

ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …

Leave a Reply

Your email address will not be published. Required fields are marked *

You cannot copy content of this page.