May 25, 2025
WhatsApp Image 2024-07-21 at 11.18.38 AM
ಉಡುಪಿ: ಹುಚ್ಚು ನಾಯಿಯೊಂದು ಹಲವಾರು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿ ನಗರದಲ್ಲಿ ಸಂಭವಿಸಿದೆ.
ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದೆ ಎನ್ನಲಾಗಿದೆ. ಕೆಲವರ ಕಾಲಿನ ಮಾಂಸ ಕೂಡ ಕಚ್ಚಿ ತಿಂದಿದೆ ಎಂದು ತಿಳಿದುಬಂದಿದೆ. ಗಾಯಗೊಂಡ ಎಲ್ಲರು ಉಡುಪಿ ಜಿಲ್ಲಾಸ್ಪತ್ರೆಗೆ ತೆರಳಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಸ್ಥಳೀಯವಲ್ಲದ ಎಲ್ಲಿಂದಲೋ ಬಂದ ಈ ನಾಯಿಗೆ ಹುಚ್ಚು ಹಿಡಿದಿರುವುದನ್ನು ಸ್ಥಳೀಯರು ಗಮನಿಸಿದರು. ಬಳಿಕ ನಾಯಿಯು ತೀರಾ ಸುಸ್ತಾಗಿ ಉಡುಪಿಯ ನಾರ್ತ್ ಶಾಲೆಯ ಆವರಣದಲ್ಲಿ ಬಂದು ಬಿದ್ದಿರುವುದನ್ನು ಸಾರ್ವಜನಿಕರು ಗುರುತಿಸಿ, ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರಿಗೆ ತಿಳಿಸಿದರು.
ನಿತ್ಯಾನಂದ ಒಳಕಾಡು ತಕ್ಷಣ ನಗರಸಭೆ ಪೌರಾಯುಕ್ತ ರಾಯಪ್ಪ ಹಾಗೂ ಪ್ರಾಣಿದಯಾ ಸಂಘದವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತರು ಹಾಗೂ ಪ್ರಾಣಿದಯಾ ಸಂಘದ ಮಂಜುಳಾ ಹಾಗೂ ಪೃಥ್ವಿ ಪರಿಶೀಲನೆ ನಡೆಸಿದರು. ನಂತರ ಪಶು ವೈದ್ಯರನ್ನು ಕರೆಸಿ ನಾಯಿಗೆ ಚಚ್ಚುಮದ್ದು ನೀಡಲಾಯಿತು ಎಂದು ತಿಳಿದುಬಂದಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>