ಭಜರಂಗದಳಕ್ಕೂ ಚೈತ್ರಾ ಕುಂದಾಪುರಗು ಯಾವುದೇ ರೀತಿಯಾದ ಸಂಬಂಧ ಇಲ್ಲ : ಶರಣ್ ಪಂಪ್ ವೆಲ್

ಮಂಗಳೂರು : ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಚೈತ್ರ ಮತ್ತು ಗ್ಯಾಂಗ್ ಎಲ್ ಏ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ ಪಂಪವೆಲ್ ಹೇಳಿಕೆ ಒಂದನ್ನು ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚೈತ್ರ ಕುಂದಾಪುರವು ಹಾಗೂ ನಮ್ಮ ಬಜರಂಗದಳಕ್ಕೂ ಯಾವುದೇ ರೀತಿಯಾದಂತಹ ಸಂಬಂಧವಿಲ್ಲ ಆಕೆ ಬಜರಂಗದಳದ ಸದಸ್ಯಯು ಅಲ್ಲ ಎಂದು ಶರಣ್ ಪಂಪವೆಲ್ ಸ್ಪಷ್ಟಪಡಿಸಿದ್ದಾರೆ.

 

ಚೈತ್ರ ಕುಂದಾಪುರ ಉತ್ತಮ ಭಾಷಣಕಾರ್ತಿ ಈ ಕಾರಣದಿಂದ ಬಜರಂಗದಳದ ಕಾರ್ಯಕ್ರಮಕ್ಕೆ ಆಕೆಯನ್ನು ಆಹ್ವಾನಿಸಿದ್ದು ನಿಜ. ಒಂದು ವೇಳೆ ಅವರು ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ.ನಮ್ಮ ಸಂಘಟನೆಯಲ್ಲಿ ಇಂತಹ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಆಸ್ಪದವಿಲ್ಲ. ಇಂತಹ ಪ್ರಕರಣಗಳು ಮರುಕಳಿಸಬಾರದು. ಇದರಲ್ಲಿ ಯಾರೇ ತಪ್ಪು ಮಾಡಿದರೂ ಕೂಡ ಅವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಅವರು ತಿಳಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಜ್ರದೇಹಿ ಮಠದ ಸ್ವಾಮೀಜಿಗಳು ನನ್ನ ಗಮನಕ್ಕೆ ತಂದಿದ್ದರು. ಎರಡು ತಿಂಗಳ ಹಿಂದೆಯೇ ನನಗೆ ಈ ಕುರಿತಾಗಿ ಕರೆ ಮಾಡಿ ತಿಳಿಸಿದರು ಅವರಿಗೆ ನಾನು ನೀವು ತಪ್ಪು ಮಾಡಿಲ್ಲವೆಂದರೆ ತಲೆಕೆಡಿಸಿಕೊಳ್ಳಬೇಡಿ ಎಂದು ದೇವರೇ ಹೇಳಿದ್ದೆ ಎಂದರು.

Check Also

ಉಡುಪಿ: ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿ ಸಾವು..!

ಉಡುಪಿ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮೂಡಬಳ್ಳೆಯಲ್ಲಿ …

Leave a Reply

Your email address will not be published. Required fields are marked *

You cannot copy content of this page.