ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; 48 ವಾಹನಗಳು ಜಖಂ

ಮುಂಬೈ: ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಬರುವ ಪುಣೆಯ ನಾವಲೆ ಸೇತುವೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಟ್ಯಾಂಕರ್‌ವೊಂದು ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು ಕನಿಷ್ಠ 15 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಅಪಘಾತವು ಭಾನುವಾರ ರಾತ್ರಿ 8:30ರ ಸುಮಾರಿಗೆ ಸಂಭವಿಸಿದ್ದು, ಟ್ಯಾಂಕರ್‌ವೊಂದರ ಬ್ರೇಕ್ ವೈಫಲ್ಯದಿಂದಾಗಿ ಕನಿಷ್ಠ 48 ವಾಹನಗಳು ಅಪಘಾತಕ್ಕೀಡಾಗಿವೆ. ತಕ್ಷಣವೇ ಪುಣೆ ಅಗ್ನಿಶಾಮಕ ದಳ ಮತ್ತು ಪುಣೆ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (PMRDA) ರಕ್ಷಣಾ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದವು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಸಂಚಾರ ಸುಗಮಗೊಳಿಸಲಾಯಿತು ಎಂದು ಪುಣೆ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (ಪಿಎಂಆರ್‌ಡಿಎ) ಅಗ್ನಿಶಾಮಕ ದಳ ತಿಳಿಸಿದೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ ಸೇತುವೆಯಲ್ಲಿ ಕೆಳಮುಖವಾದ ಇಳಿಜಾರಿನಲ್ಲಿ ಟ್ರಕ್ ಬ್ರೇಕ್ ಫೇಲ್ ಆಗಿರುವುದು ಅಪಘಾತಕ್ಕೆ ಕಾರಣ ಎನ್ನಲಾಗಿದೆ.

Check Also

ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್‌ಗೆ ಜಾಮೀನು

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿ 5 ಕೋಟಿಗೂ ಅಧಿಕ ಹಣ …

Leave a Reply

Your email address will not be published. Required fields are marked *

You cannot copy content of this page.