ಕಾರ್ಕಳ: ಕಣಿವೆಗೆ ಉರುಳಿಬಿದ್ದ ಕಾರು :ವಿದ್ಯಾರ್ಥಿ ಮೃತ್ಯು

ಕಾರ್ಕಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿಬಿದ್ದ ಪರಿಣಾಮ ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಮೃತರನ್ನು ಕಾಪು ತಾಲೂಕಿನ ಉಚ್ಚಿಲ ಮೂಲದ ವೈಷ್ಣವ್ ಎಂದು ಗುರುತಿಸಲಾಗಿದೆ. ಇವರು ಉಡುಪಿಯ ಖಾಸಗಿ ಕಾಲೇಜಿನ  ಪ್ರಥಮ ಪಿಯುಸಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಮಹಿಳೆಯರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೈಷ್ಣವ್ ಉಚ್ಚಿಲದಲ್ಲಿರುವ ತಮ್ಮ ಮನೆಯಲ್ಲಿ ಬಾಡಿಗೆಗೆ ಇರುವ ಕುಟುಂಬದ ಸದಸ್ಯರೊಟ್ಟಿಗೆ ಬೆಂಗಳೂರಿಗೆ ತಿರುಗಾಡಲು ಹೋಗಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಾರ್ಕಳದಿಂದ ಬೆಳ್ಮಣ್‌ ಕಡೆಗೆ ಸಾಗುತ್ತಿದ್ದ ಕಾರು ಮಂಜರಪಲ್ಕೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿ ಬಿದ್ದಿದೆ. ಕಾರಿನಲ್ಲಿ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರೆನ್ನಲಾಗಿದೆ.

ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Check Also

ಮಂಗಳೂರು: ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿನಿ ಬಲಿ..!!

ಇಲಿ ಜ್ವರಕ್ಕೆ ಯುವತಿ ಸಾವನ್ನಪ್ಪಿದ ಘಟನೆ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವರದಿಯಾಗಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ …

Leave a Reply

Your email address will not be published. Required fields are marked *

You cannot copy content of this page.