ಬೆಂಗಳೂರು: ಜೂನ್ 26 ರಂದು ಗೃಹ ಲಕ್ಷ್ಮಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಲಿದೆ ಎನ್ನಲಾಗಿದೆ. ಈ ಬಗ್ಗೆ ಈಗಾಗಲೇ ಡಿಸಿಎಂ ಶಿವಕುಮಾರ್ ಸೇರಿದಂತೆ ಕೆಲವು ಸಚಿವರು ಇಂದು ನಡೆದ ಸಭೆಯಲ್ಲಿ ಪೂರ್ವಭಾವಿ ಸಿದ್ದತೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಅಂತ ತಿಳಿದು ಬಂದಿದೆ.
ಇಂದು ನಡೆದ ಸಭೆಯಲ್ಲಿ, ಗೃಹ ಲಕ್ಷ್ಮಿ ಯೋಜನೆಗೆ ಮೊಬೈಲ್ ಆಪ್ ಅನ್ನು ಕೂಡ ಪರಿಶೀಲನೆ ನಡೆಸಲಾಗಿದೆ ಅಂತ ತಿಳಿದಯ ಬಂದಿದೆ. ಇನ್ನೂ ಈ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಮುಂದಾದ್ರೆ ಸರ್ವರ್ ತೊಂದರೆ ಉಂಟಾಗಲಿದೆ ಎನ್ನಲಾಗಿದೆ. ಹೀಗಾಗಿ ಈಗ ಆಗಿರುವ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವುದಕ್ಕೆ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಇನ್ನೂ ಈ ಯೋಜನೆಗೆ ಕಂದಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಜೊತೆಗೆ ಐಟಿಬಿಟಿ ಇಲಾಖೆಗಳ ಸಮನ್ವಯ ಬಹಳ ದೊಡ್ಡ ಪ್ರಮಾಣದಲ್ಲಿ ಅಗತ್ಯವಿದ್ದು, ಇಂದಿನ ಸಭೆಯಲ್ಲಿ ಈ ಬಗ್ಗೆ ಕೂಡ ಮೂರು ಖಾತೆಗಳ ಸಚಿವರು ಭಾಗವಹಿಸಿದ್ದು, ಅಧಿಕಾರಿಗಳನ್ನು ಮತ್ತು ಅಧಿಕಾರಿಯೇತ ಸಿಬ್ಬಂದಿಗೆಳನ್ನು ಹೇಗೆ ಬಳಿಸಿಕೊಳ್ಳಬೇಕು ಎನ್ನುವುದನ್ನು ಚರ್ಚೆ ನಡೆಸಲಾಗಿದೆ ಅಂತ ತಿಳಿದು ಬಂದಿದೆ.