

ಮುಕುಂದಕೃಪ ಇಂಗ್ಲೀಷ್ ಮೀಡಿಯಂ ನರ್ಸರಿ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಉಡುಪಿ ಇದರ ಸ್ಥಾಪಕರ ದಿನಾಚರಣೆ ಮತ್ತು ಸುವರ್ಣ ಮಹೋತ್ಸವದ ಸಮಾರೋಪ ಸಮಾರಂಭ ದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಸಂಸ್ಥೆಗೆ ಶುಭ ಹಾರೈಸಿದರು.
ಸಮಾರಂಭವನ್ನು ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಪರಮ ಪೂಜ್ಯ ಶ್ರೀ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಸಮಾರಂಭದಲ್ಲಿ ಗಣ್ಯರಾದ ಶ್ರೀ ವರದರಾಯ ಪೈ, ಡಾ. ಪಿ. ವಿ. ಭಂಡಾರಿ, ಶ್ರೀ ಟಿ. ರಂಗ ಪೈ, ಶ್ರೀ ಗಿರೀಶ್ ಭಟ್, ಶ್ರೀಮತಿ ಪ್ರಭಾವತಿ ಎಸ್. ಅಡಿಗ ಮೊದಲಾದ ಗಣ್ಯರು ಉಪಸ್ಥಿತರಿದ್ದರು.