ಕೇರಳದ ಭಗವತಿ ದೇವಸ್ಥಾನಕ್ಕೆ ಬೆತ್ತಲೆಯಾಗಿ ನುಗ್ಗಿ ದೇವರ ಮೂರ್ತಿ ಧ್ವಂಸ ಮಾಡಿದ ವ್ಯಕ್ತಿ: ಹಿಂದು ಸಂಘಟನೆ ಆಕ್ರೋಶ

ತ್ರಿಸ್ಸೂರ್:  ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಮೂಲಸ್ಥಾನದಲ್ಲಿದ್ದ ಪ್ರಮುಖ ದೇವರ ಮೂರ್ತಿಯನ್ನು ಧ್ವಂಸ ಮಾಡಿರುವ ಘಟನೆ ಕೇರಳದ ಕೊಡುಂಗಲ್ಲೂರಿನಲ್ಲಿರುವ ಶ್ರೀ ಕುರುಂಬಾ ಭಗವತಿ ದೇವಸ್ಥಾನದಲ್ಲಿ ನಡೆದಿದೆ.

ಈ ಘಟನೆ ಇಂದು ಬೆಳಗ್ಗೆ 4.30 ಸುಮಾರಿಗೆ ನಡೆದಿದೆ. ಮೂಲಗಳ ಪ್ರಕಾರ ಆರೋಪಿಯು ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ತನಿಖೆ ಮುಂದುವರಿದಿದೆ.

ಈ ಘಟನೆಯನ್ನು ಖಂಡಿಸಿರುವ ಹಿಂದು ಐಕ್ಯ ವೇದಿ ಹೆಸರಿನ ಹಿಂದು ಸಂಘಟನೆ, ತಾಲೂಕಿನ ಮಟ್ಟದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.

Check Also

ಮಂಗಳೂರು: ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿನಿ ಬಲಿ..!!

ಇಲಿ ಜ್ವರಕ್ಕೆ ಯುವತಿ ಸಾವನ್ನಪ್ಪಿದ ಘಟನೆ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವರದಿಯಾಗಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ …

Leave a Reply

Your email address will not be published. Required fields are marked *

You cannot copy content of this page.