ಕಾಪು: ರೈಲ್ವೆ ನಿಲ್ದಾಣದಲ್ಲಿ ಹೃದಯಾಘಾತ- ಬ್ಯಾಂಕ್ ಸಿಬ್ಬಂದಿ ಮೃತ್ಯು

ಕಾಪು: ಭಾರತ್‌ ಬ್ಯಾಂಕ್‌ ವಿಲೇಪಾರ್ಲೆ ಪೂರ್ವ ಶಾಖೆಯ ಉಪಪ್ರಬಂಧಕ, ಮುಂಬಯಿ ಬಿಲ್ಲವರ ಅಸೋಸಿಯೇಶನ್‌ ಸದಸ್ಯ ಸುಧಾಕರ್‌ ಟಿ. ಅಂಚನ್‌ (52) ಸಂಬಂಧಿಕರ ಮದುವೆಗೆ ಆಗಮಿಸಿ, ಮುಂಬಯಿಗೆ ತೆರಳುತ್ತಿದ್ದ ವೇಳೆ ರೈಲ್ವೇ ನಿಲ್ದಾಣದಲ್ಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಮದುವೆಗಾಗಿ ಊರಿಗೆ ಬಂದಿದ್ದು, ಮದುವೆ ಮುಗಿಸಿ ಮುಂಬಯಿಗೆ ಹಿಂದಿರುಗುತ್ತಿದ್ದ ವೇಳೆ ಥಾಣೆಯಲ್ಲಿ ರೈಲಿನಿಂದ ಇಳಿಯುತ್ತಿದ್ದಾಗ ಹೃದಯಾಘಾತಕ್ಕೊಳಗಾಗಿ ಅಸುನೀಗಿದ್ದಾರೆ. ಕಟಪಾಡಿಯವರಾಗಿರುವ ಅವರು ಮುಂಬಯಿಯಲ್ಲಿ ನೆಲೆಸಿದ್ದು ಭಾರತ್‌ ಬ್ಯಾಂಕ್‌ ಉದ್ಯೋಗಿಯಾಗಿ, ಬಿಲ್ಲವ ಸಮಾಜದ ಸಂಘಟನೆಯ ಪ್ರಮುಖರಾಗಿ ಗುರುತಿಸಲ್ಪಟ್ಟಿದ್ದರು. ಇವರ ನಿಧನಕ್ಕೆ ಹಲವು ಮಂದಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೃತರು ತಾಯಿ, ಪತ್ನಿ, ಮತ್ತು ಪುತ್ರನನ್ನು ಅಗಲಿದ್ದಾರೆ.

Check Also

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.