ಅಪಾರ್ಟ್‌ಮೆಂಟ್ ಮಹಡಿಯಿಂದ ಅಯಾತಪ್ಪಿ ಬಿದ್ದು ಮಹಿಳೆ ಮೃತ್ಯು

ಕುಂದಾಪುರ: ನಗರದ ಮುಖ್ಯ ರಸ್ತೆಯ ಹಳೇ ಗೀತಾಂಜಲಿ ಟಾಕೀಸಿನ ಜಾಗದಲ್ಲಿ ನಿರ್ಮಿಸಲಾಗಿದ್ದ ಫ್ಲ್ಯಾಟಿನ ಮಹಡಿಯಿಂದ ಅಚಾನಕ್ ಆಗಿ ಬಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಿಳೆಯನ್ನು ಫ್ಲ್ಯಾಟಿನ ನಿವಾಸಿ ಲಕ್ಷ್ಮೀ ಪ್ರತಾಪ್‌ ನಾಯಕ್ ಎಂದು ಗುರುತಿಸಲಾಗಿದೆ.

ಆದಿತ್ಯವಾರ ಸಂಜೆ 7.00 ಗಂಟೆಯ ಸುಮಾರಿಗೆ ಫ್ಲ್ಯಾಟಿನ ಮಹಡಿಯ ಮೇಲೆ ಒಣಗಿಸಲು ಹಾಕಿದ್ದ ತೆಂಗಿನ ಕಾಯಿಯನ್ನು ತರಲು ಹೋಗಿದ್ದು ಅಕಸ್ಮಾತ್ತಾಗಿ ಮಹಡಿಗೆ ಅಳವಡಿಸಲಾಗಿದ್ದ ಫೈಬ‌ರ್ ಶೀಟ್ ಮೇಲೆ ಕಾಲಿಟ್ಟಿದ್ದರಿಂದ ಅದು ತುಂಡಾಗಿ ನೇರ ಲಿಫ್ಟ್ ನ ಮೇಲೆ ಬಿದ್ದರು ಅವರ ತಲೆಗೆ ಹಾಗೂ ಕೈಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಸ್ಥಳದಲ್ಲೇ ಮೃತಪಟ್ಟರು.

ಸುದ್ದಿ ತಿಳಿದ ತಕ್ಷಣ ಆಗಮಿಸಿದ ಕುಂದಾಪುರ ಠಾಣಾ ಪೊಲೀಸರು ಲಿಫ್ಟ್ ಜಾಗದಲ್ಲಿ ಸಿಲುಕಿಕೊಂಡ ಮೃತದೇಹವನ್ನು ಹೊರ ತೆಗೆಯಲು ಹರಸಾಹಸ ಪಟ್ಟರು ಕೊನೆಯಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಲಿಫ್ಟ್ ಗೆ ಅಳವಡಿಸಲಾಗಿದ್ದ ಕಬ್ಬಿಣದ ಸಲಾಕೆಗಳನ್ನು ತುಂಡರಸಿ ಮೃತ ದೇಹವನ್ನು ಹೊರತೆಗೆಯಲಾಯಿತು ಕುಂದಾಪುರದ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೃತದೇಹವನ್ನು ನಗರದ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಮೃತರು ನಗರದ ಆಡಿಟ‌ರ್ ಪ್ರತಾಪ್ ನಾಯಕ್ ರವರ ಪತ್ನಿಯಾಗಿದ್ದು ಇಬ್ಬರು ಪುತ್ರರನ್ನು ಅಗಲಿದ್ದಾರೆ.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.