ಸುರತ್ಕಲ್: ಜಲೀಲ್ ಹತ್ಯೆ ಪ್ರಕರಣ ;ತನಿಖೆ ತೀವ್ರಗೊಳಿಸಿದ ಪೊಲೀಸರು..!

ಮಂಗಳೂರು : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿ 24 ರಂದು ಸಂಜೆ ನಡೆದ ಅಂಗಡಿ ಮಾಲಿಕ ಜಲೀಲ್ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.

ಆರೋಪಿಗಳ ಬಂಧನಕ್ಕೆ ನಾಲ್ಕು ತಂಡಗಳ ರಚನೆ ಮಾಡಲಾಗಿದೆ. ಹತ್ಯೆಯಾದ ಜಲೀಲ್ ಮೃತ ದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಡೆಯುತ್ತಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತ ದೇಹವನ್ನು ಜಲೀಲ್ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತಿದೆ . ಬಳಿಕ ಇಂದು ಅಪರಾಹ್ನ ಕೃಷ್ಣಪುರದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಇಬ್ಬರು ಮುಸುಕುದಾರಿಗಳು ಬಂದು ಜಲೀಲ್ ಅವರನ್ನು ಚೂರಿಯಿಂದ ಇರಿದು ಪರಾರಿಯಾಗಿದ್ದರು. ಜಲೀಲ್ ಅವರ ಅಂಗಡಿಯಲ್ಲಿ ಹಾಕಿದ್ದ ಸಿಸಿ ಟಿವಿ ಕೂಡ ಕೆಟ್ಟು ಹೋಗಿದ್ದರಿಂದ ಆರೋಪಿಗಳ ಚಹರೆ ಕೂಡ ಸಿಗುತ್ತಿಲ್ಲ. ಆರೋಪಿಗಳು ಜಲೀಲ್ ಅಂಗಡಿಯ ಹಿಂಬದಿಯಿಂದ ಬಂದು ಕೊಲೆ ಮಾಡಿ ಕತ್ತಲೆಯಲ್ಲೇ ಪರಾರಿಯಾಗಿದ್ದರು. ಈ ಸಂದರ್ಭ ಜಲೀಲ್ ಸಹಾಯಕ್ಕಾಗಿ ಬೊಬ್ಬೆ ಹಾಕಿದ್ದು ಬೊಬ್ಬೆ ಕೇಳಿದ ಸನಿಹದ ಅಂಗಡಿಯವ ಧಾವಿಸಿ ಬಂದಿದ್ದಾರೆ. ಅದಾಗಲೇ ಆರೋಪಿಗಳು ಪರಾರಿಯಾಗಿದ್ದರು. ತೀವ್ರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಜಲೀಲ್ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆಗೆ ಮೃತ ಪಟ್ಟಿದ್ದರು.

Check Also

ಮಂಗಳೂರು: ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿನಿ ಬಲಿ..!!

ಇಲಿ ಜ್ವರಕ್ಕೆ ಯುವತಿ ಸಾವನ್ನಪ್ಪಿದ ಘಟನೆ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವರದಿಯಾಗಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ …

Leave a Reply

Your email address will not be published. Required fields are marked *

You cannot copy content of this page.