ಮಂಗಳೂರು: ಅಂಗಡಿಯಲ್ಲಿ ಅಗ್ನಿ ಅವಘಡ- ಲಕ್ಷಾಂತರ ರೂ ನಷ್ಟ

ಮಂಗಳೂರು: ದಿನಸಿ ಅಂಗಡಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಮಣ್ಣಗುಡ್ಡದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮಣ್ಣಗುಡ್ಡದ ಮಠದ ಕಣಿ ಮಿಶನ್ ಗೋರಿ ರಸ್ತೆಯಲ್ಲಿರುವ ಸಂದೀಪ್ ಎಂಬವರಿಗೆ ಸೇರಿದ ದಿನಸಿ ಅಂಗಡಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಮುಂಜಾನೆ 5.30ರ ಸುಮಾರಿಗೆ ಘಟನೆ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ಸುಮಾರು ಎರಡು ಲಕ್ಷ ರೂ ನಷ್ಟವಾಗಿದೆ ಎಂದು ಪ್ರಾಥಮಿಕ ಅಂದಾಜಿಸಲಾಗಿದೆ. ಈ ಅಂಗಡಿ ಬಳಿ ಇತರ ಅಂಗಡಿಗಳಿವೆ. ಆದರೆ ಅಗ್ನಿಶಾಮಕ ದಳದವರು ಸಕಾಲದಲ್ಲಿ ಬಂದು ಬೆಂಕಿ ನಂದಿಸಿದ ಕಾರಣ ಇತರ ಅಂಗಡಿಗಳು ಬೆಂಕಿಯಿಂದ ಪಾರಾಗಿವೆ.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.