ಉಡುಪಿ : ಕಸ್ಟಮ್ಸ್‌ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಆನ್‌ಲೈನ್‌ನಲ್ಲಿ ವಂಚನೆ ಪ್ರಕರಣ : ಇಬ್ಬರ ಬಂಧನ

ಉಡುಪಿ: ಮುಂಬಯಿಯ ಕಸ್ಟಮ್ಸ್‌ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಆನ್‌ಲೈನ್‌ನಲ್ಲಿ ಕೋಟ್ಯಂತರ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಸೆನ್‌ ಪೊಲೀಸರು ಗುಜರಾತ್‌ ರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಗುಜರಾತ್‌ ರಾಜ್ಯದ ಸೂರತ್‌ ಸಿಟಿ ದಭೋಲಿ ರಸ್ತೆಯ ನಿವಾಸಿ ನವಾದಿಯಾ ಮುಖೇಶ್‌ ಭಾಯಿ/ಗಣೇಶ್‌ ಭಾಯಿ (44), ಗುಜರಾತ್‌ನ ರಾಜ್‌ಕೋಟ್‌ ಜಿಲ್ಲೆಯ ಆಕಾಶವಾಣಿ ಚೌಕ್‌ ಯೂನಿವರ್ಸಿಟಿ ರಸ್ತೆಯ ನಿವಾಸಿ ಧರಮ್‌ಜೀತ್‌ ಕಮಲೇಶ್‌ ಚೌಹಾನ್‌ (28) ಬಂಧಿತ ಆರೋಪಿಗಳು. ಆರೋಪಿಗಳಿಂದ 5 ಮೊಬೈಲ್‌ ಫೋನ್‌ಗಳನ್ನು ಹಾಗೂ 13.95 ಲಕ್ಷ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ವೈದ್ಯರಾಗಿರುವ ಡಾ| ಅರುಣ್‌ ಕುಮಾರ್‌ (53) ಅವರಿಗೆ ಜು. 29ರಂದು ಅಪರಿಚಿತ ವ್ಯಕ್ತಿಗಳು ಫೋನ್‌ ಕರೆ ಮಾಡಿ ಕಸ್ಟಮ್ಸ್‌ನಿಂದ ಕರೆ ಮಾಡುವುದಾಗಿ ತಿಳಿಸಿ, ನಿಮ್ಮ ಆಧಾರ್‌ ನಂಬರ್‌ ಬಳಸಿ ಬುಕ್‌ ಆಗಿರುವ ಕೊರಿಯರ್‌ನಲ್ಲಿ 5 ಪಾಸ್‌ಪೋರ್ಟ್‌, 5 ಎಟಿಎಂ ಕಾರ್ಡ್‌, 200 ಗ್ರಾಂ. ಎಂಡಿಎಂಎ ಹಾಗೂ 5000 ಯುಎಸ್‌ ಡಾಲರ್‌ವಿದ್ದು, ಕೋರಿಯರ್‌ ಮುಂಬಯಿಯ ಕಸ್ಟಮ್ಸ್‌ ಅಧಿಕಾರಿಗಳ ವಶದಲ್ಲಿ ಇರುವುದಾಗಿ ತಿಳಿಸಿ ಹೆದರಿಸಿದ್ದರು.
ಆ ಬಳಿಕ ಪೊಲೀಸ್‌ ಅಧಿಕಾರಿ ಯೆಂದು ನಂಬಿಸಿ ಡಾ| ಅರುಣ್‌ ಕುಮಾರ್‌ಗೆ ಕರೆ ಮಾಡಿ, ನಿಮ್ಮ ಆಧಾರ್‌ ಕಾರ್ಡ್‌ ದುರ್ಬಳಕೆಯ ಬಗ್ಗೆ ದೂರನ್ನು ಸ್ವೀಕರಿಸಲಾಗಿದ್ದು, ಆಧಾರ್‌ ಕಾರ್ಡ್‌ ಅನ್ನು ಭಯೋ ತ್ಪಾದಕರು ಸಿಮ್‌ ಖರೀದಿಸಲು ಬಳಸಿ ದ್ದಾರೆ. ಈ ದೂರಿಗೆ ಸಂಬಂಧಿಸಿ ನಿಮ್ಮನ್ನು “ವರ್ಚುವಲ್‌ನಲ್ಲಿ ಆರೆಸ್ಟ್‌’ ಮಾಡುವು ದಾಗಿ ಬೆದರಿಕೆ ಹಾಕಿ ದ್ದರು. ಅಲ್ಲದೇ ಜು. 29ರಿಂದ ಆ. 9ರ ವರೆಗೆ ಮನೆಯ ರೂಮ್‌ ಒಂದರಲ್ಲಿ ಇರುವಂತೆ ಹಾಗೂ ಬೇರೆ ಯವರೊಂದಿಗೆ ಯಾವುದೇ ಸಂಪರ್ಕ ಮಾಡದಂತೆ ಸೂಚಿಸಿದ್ದರು.
ಸೆನ್‌ ಅಪರಾಧ ಪೊಲೀಸ್‌ ಠಾಣೆಯ ಪೊಲೀಸ್‌ ನಿರೀಕ್ಷಕ ರಾಮಚಂದ್ರ ನಾಯಕ್‌ ಅವರ ನೇತೃತ್ವದಲ್ಲಿ ಎಸ್‌ಐ ಅಶೋಕ್‌, ಸಿಬಂದಿ ಪ್ರವೀಣ ಶೆಟ್ಟಿಗಾರ್‌, ರಾಜೇಶ್‌, ಅರುಣ ಕುಮಾರ್‌, ಯತೀನ್‌ ಕುಮಾರ್‌, ರಾಘವೇಂದ್ರ ಕಾರ್ಕಡ, ದೀಕ್ಷಿತ್‌, ಪ್ರಶಾಂತ್‌, ಮುತ್ತೆಪ್ಪ ಆಡೀನ್‌, ಮಾಯಪ್ಪ ಗಡದೆ, ಪರಶುರಾಮ ಮತ್ತು ಸುದೀಪ್‌ ಅವರನ್ನು ಒಳಗೊಂಡ ವಿಶೇಷ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ. ಈ ಪ್ರಕರಣವನ್ನು ಸರಿಪಡಿ ಸಲು ಅಪರಿಚಿತರು ಸೂಚಿಸಿದ ವಿವಿಧ ಬ್ಯಾಂಕ್‌ ಖಾತೆಗಳಿಗೆ ಹಣ ಪಾವತಿಸುವಂತೆ ತಿಳಿ ಸಿದ್ದು, ಅದರಂತೆ ಡಾ| ಅರುಣ್‌ ಕುಮಾರ್‌ ತಮ್ಮ ಖಾತೆ ಯಿಂದ ಆ. 6ರಿಂದ ಆ. 9ರ ವರೆಗೆ ಹಂತವಾಗಿ ಒಟ್ಟು 1,33,81,000 ರೂ. ಹಣವನ್ನು ವರ್ಗಾ ಯಿಸಿರುವುದಾಗಿ ದೂರಿ ನಲ್ಲಿ ತಿಳಿಸಿದ್ದರು. ಈ ಬಗ್ಗೆ ಡಾ| ಅರುಣ್‌ ಕುಮಾರ್‌ ಗೋವಿಂದ ಕರ್ನವರ್‌ ನೀಡಿದ ದೂರಿನಂತೆ ಉಡುಪಿ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Check Also

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು …

Leave a Reply

Your email address will not be published. Required fields are marked *

You cannot copy content of this page.