BREAKING NEWS : ‘KMF’ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ : ಸ್ಯಾಂಡಲ್ ವುಡ್ ನಿರ್ಮಾಪಕ ಪ್ರಕಾಶ್ ಅರೆಸ್ಟ್

ಬೆಂಗಳೂರು : ಕೆಎಂಎಫ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸಿದ ನಿರ್ಮಾಪಕ ಪ್ರಕಾಶ್ ನ ನ್ನು ಅಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಟ ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ಶಬಾಷ್ ಬಡ್ಡಿ ಮಗನೇ ಸಿನಿಮಾದ ನಿರ್ಮಾಪಕ ಪ್ರಕಾಶ್ ಬಂಧನವಾಗಿದೆ. ಇದೀಗ ವಂಚನೆ ಕೇಸ್ ನಲ್ಲಿ ನಿರ್ಮಾಪಕನ ಬಂಧನವಾಗಿದೆ.

ಕೆಎಂಎಫ್ ನಲ್ಲಿ 20 ಲಕ್ಷಕ್ಕೆ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ನಂಬಿಸಿ ಚಿಕ್ಕಬಳ್ಳಾಪುರ ಮೂಲದ ಚರಣ್ ಎಂಬುವವರಿಂದ ಮುಂಗಡವಾಗಿ 10 ಲಕ್ಷ ಹಣ ಪಡೆದಿದ್ದರು. ಕಳೆದ ಡಿಸೆಂಬರ್ ನಲ್ಲಿ ಕೆಎಂಎಫ್ ನಲ್ಲಿ ವಿವಿಧ ಹುದ್ದೆಗಳ ಲಿಖಿತ ಪರೀಕ್ಷೆ ನಡೆದಿತ್ತು. ಕೆಎಂಎಫ್ ನಿರ್ದೇಶಕರ ಸರ್ಕಾರಿ ಲಾಂಛನ ನಕಲು ಮಾಡಿ ಈತ ಹುದ್ದೆಯ ಆದೇಶದ ಪ್ರತಿ ನೀಡುತ್ತಿದ್ದನು. ಸದ್ಯ ಚರಣ್ ನೀಡಿದ ದೂರಿನ ಮೇರೆಗೆ ಪ್ರಕಾಶ್ ನನ್ನು ಪೊಲೀಸರು ಬಂಧಿಸಿದ್ದಾರೆ.

Check Also

ರೋಟರಿ ಉಡುಪಿ: ವಿದ್ಯಾರ್ಥಿಗಳ ದತ್ತು ಸ್ವೀಕಾರ..!

ರೋಟರಿ ಉಡುಪಿ ವತಿಯಿಂದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವೈದ್ಯರ ದಿನಾಚರಣೆ, ಪತ್ರಿಕಾ ದಿನಾಚರಣೆ ಮತ್ತು ಲೆಕ್ಕಪರಿಶೋಧಕರ ದಿನಾಚರಣೆ ಕಾರ್ಯಕ್ರಮವು ಸೋಮವಾರ …

Leave a Reply

Your email address will not be published. Required fields are marked *

You cannot copy content of this page.