ಮಂಗಳೂರು:  ದೈವಾರಾಧಕ ಅಶೋಕ್‌ ಬಂಗೇರ ಹೃದಯಾಘಾತದಿಂದ ನಿಧನ..!

ಮಂಗಳೂರು: ಕೊರಗಜ್ಜ ದೈವಾರಾಧಕರಾಗಿದ್ದ ಅಶೋಕ್ ಬಂಗೇರ ಅವರು ಹೃದಯಾಘಾತದಿಂದ ವಿಧಿವಶರಾದರು.

ಹಲವು ವರ್ಷಗಳಿಂದ ಅವರು ತಮ್ಮನ್ನು ದೈವಾರಾಧನೆಯಲ್ಲಿ ತೊಡಗಿಸಿಕೊಂಡಿದ್ದ ಅಶೋಕ್ ಬಂಗೇರ ಅವರು  ನಿನ್ನೆ ರಾತ್ರಿ ರಕ್ತೇಶ್ವರಿ ನೇಮ ಆದ ಬಳಿಕ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಮಂಗಳೂರಿನ ಪದವಿನಂಗಡಿ ಬಳಿ ಇರುವ ಕೊರಗಜ್ಜನ ಸಾನಿಧ್ಯದಲ್ಲಿ ಅವರು ಕೊರಗಜ್ಜನ ಸೇವೆ ಮಾಡಿಕೊಂಡು ಬರುತ್ತಿದ್ದರು. ಅವರು ದೈವಾರಾಧನೆಯಲ್ಲಿ ಅದ್ಭುತ ಸೇವೆಯನ್ನು ಮಾಡುತ್ತಾ, ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಇದ್ದು ಅನೇಕ ಯುವ ಸಮೂಹಕ್ಕೆ ಮಾದರಿಯಾಗಿದ್ದರು.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.