ಬಾವಿಗೆ ಬಿದ್ದು 3 ವರ್ಷದ ಪುಟ್ಟ ಬಾಲಕಿ ಸಾವು..!

ಉತ್ತರ ಕನ್ನಡ: ಪುಟ್ಟ ಬಾಲಕಿಯೊಬ್ಬಳು ಆಯತಪ್ಪಿ ಬಾವಿಗೆ ಬಿದ್ದ ಘಟನೆ ಕಾರವಾರದ ಹರಿದೇವನಗರದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು 3 ವರ್ಷ ವಯಸ್ಸಿನ ಸ್ತುತಿ. ಬಾಲಕಿ ಆಟವಾಡುತ್ತಾ ಗಣಪತಿ ಮೂರ್ತಿ ಎಂದುಕೊಂಡು ಬಾವಿಗೆ ಮಣ್ಣುಹಾಕಲು ಮುಂದಾಗಿದ್ದಾಳೆ. ಈ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದು, ಪೊಷಕರು ಹಾಗೂ ಬಡಾವಣೆಯ ನಿವಾಸಿಗಳೆಲ್ಲ ಮಗು ನಾಪತ್ತೆ ಎಂದು ಹುಡುಕಾಡುವಾಗ ಮಗುವಿನ ಮೃತದೇಹ ಪತ್ತೆಯಾಗಿದೆ. ಈ ಕುರಿತು ಕಾರವಾರ ನಗರ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಉಡುಪಿ: ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ

ಉಡುಪಿ: ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ. ಸ್ವಿಫ್ಟ್ …

Leave a Reply

Your email address will not be published. Required fields are marked *

You cannot copy content of this page.