ವಾಹನ ಪಲ್ಟಿ – ಸಹಾಯಕ ಜಿಲ್ಲಾಧಿಕಾರಿ ಸಹಿತ ಇಬ್ಬರಿಗೆ ಗಾಯ

ಮಂಗಳೂರು: ಗಡಿಭಾಗದ ಕಾಸರಗೋಡು ಜಿಲ್ಲಾ ಸಹಾಯಕ ಜಿಲ್ಲಾಧಿಕಾರಿ ಸಂಚರಿಸುತ್ತಿದ್ದ ಬೊಲೆರೊ ವಾಹನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರಣ ಸಹಾಯಕ ಜಿಲ್ಲಾಧಿಕಾರಿ ಸೇರಿದಂತೆ ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ಚೆಮ್ನಾಡ್‌ನಲ್ಲಿ ನಡೆದಿದೆ. ಸಹಾಯಕ ಜಿಲ್ಲಾಧಿಕಾರಿ ಕೆ.ದಿಲೀಪ್‌ ಕುಮಾರ್, ಗನ್‌ ಮ್ಯಾನ್ ರಂಜಿತ್ ಗಾಯಗೊಂಡವರು. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಜಿಲ್ಲೆಯ ಮೇಲ್ಪರಂಬದಿಂದ ಕಾಸರಗೋಡಿಗೆ ವಾಪಸಾಗುತ್ತಿದ್ದ ವೇಳೆ ಸಂಚರಿಸುತ್ತಿದ್ದ ಬೊಲೆರೊ ವಾಹನ ಒಳ ರಸ್ತೆ ಮೂಲಕ ಇನ್ನೊಂದು ವಾಹನ ಬಂದುದರಿಂದ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ದುರ್ಘಟನೆ ನಡೆದಿದೆ ಎನ್ನಲಾಗಿದೆ. ಪರಿಸರ ವಾಸಿಗಳು ಗಾಯಾಳುಗಳನ್ನು ಕೂಡಲೇ ಕಾಸರಗೋಡು ಜನರಲ್ ಆಸ್ಪತ್ರೆಗೆ ತಲಪಿಸಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ ಗಾಯಾಳುಗಳನ್ನು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Check Also

ಮಂಗಳೂರು: ಸ್ಕಿಡ್ಡಾಗಿ ಬಿದ್ದ ಸ್ಕೂಟರ್ – ಯುವಕ ಮೃತ್ಯು…!!

ಮಂಗಳೂರು: ನಗರದ ಸಮೀಪ ಯುವಕ ಚಲಾಯಿಸುತ್ತಿದ್ದ ಸ್ಕೂಟರ್ ಗೆ ದನ ಅಡ್ಡ ಬಂದ ಪರಿಣಾಮ ಸ್ಕೂಟರ್ ಸ್ಕಿಡ್ ಆಗಿ ಯುವಕ …

Leave a Reply

Your email address will not be published. Required fields are marked *

You cannot copy content of this page.